Darshan
ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅದನ್ನು ಕೂಡ ನಿರಾಕರಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ನಡೆದಿರುವುದು ಪದೇಪದೇ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಜೈಲಿನಲ್ಲಿ ಬದಲಾವಣೆ ತರಲು ಅಂಶು ಕುಮಾರ್ ಅವರು ಮುಂದಾಗಿದ್ದಾರೆ. ಪ್ರತಿ ದಿನ ಐಪಿಎಸ್ ಅಧಿಕಾರಿಯಿಂದ ಜೈಲಿನಲ್ಲಿ ಮಾನಿಟರಿಂಗ್ ಮಾಡಲಾಗುತ್ತಿದೆ. ಸಿಬ್ಬಂದಿಗಳಿಂದ ಪ್ರತಿದಿನ ಜೈಲಿನಲ್ಲಿ ತಪಾಸಣೆ ನಡೆಯುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರು ಜೈಲಿನೊಳಗೆ ಮೊಬೈಲ್ ಪತ್ತೆ ಆಗುತ್ತಲೇ ಇದೆ. ಮೊಬೈಲ್ ಫೋನ್ಗಳಿಗೆ ಕಡಿವಾಣ ಹಾಕಲು ಐಪಿಎಸ್ ಅಧಿಕಾರಿ ಹರಸಾಹಸ ಮಾಡುತ್ತಿದ್ದಾರೆ. ಜೈಲಿನಲ್ಲಿ ಮೊಬೈಲ್ ಸಿಗುತ್ತಿದ್ದಂತೆಯೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಸಾಲು ಸಾಲು ಕೇಸ್ ದಾಖಲಾಗುತ್ತಿವೆ. ಅಂಶು ಕುಮಾರ್ ಅವರ ಕಠಿಣ ಕ್ರಮದಿಂದ ದರ್ಶನ್ ಅವರಿಗೂ ಸಂಕಷ್ಟ ಶುರುವಾಗಿದೆ.
ಸದ್ಯಕ್ಕೆ ದರ್ಶನ್ ಅವರಿಗೆ ವಾಕಿಂಗ್ ಮಾಡಲು ಅವಕಾಶ ಇಲ್ಲ. ರೂಮಿಗೆ ಬರುತ್ತಿದ್ದ ಊಟ, ತಿಂಡಿ ಕೂಡ ಬಂದ್ ಆಗಿದೆ. ದರ್ಶನ್ ಈಗ ತಾವೇ ಹೋಗಿ ಊಟ, ತಿಂಡಿ ತರಬೇಕಿದೆ. ಈ ಮೊದಲು ಜೈಲಿನ ಸಿಬ್ಬಂದಿಯೇ ದರ್ಶನ್ ಕೊಠಡಿಗೆ ಊಟ, ತಿಂಡಿ ತಂದು ಕೊಡುತ್ತಿದ್ದರು. ಈಗ ಅದನ್ನು ಬಂದ್ ಮಾಡಲಾಗಿದೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…