ರಾಜ್ಯ

ಜೈಲಿನಲ್ಲಿ ಕಠಿಣ ನಿಯಮ ಜಾರಿ : ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅದನ್ನು ಕೂಡ ನಿರಾಕರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ನಡೆದಿರುವುದು ಪದೇಪದೇ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಜೈಲಿನಲ್ಲಿ ಬದಲಾವಣೆ ತರಲು ಅಂಶು ಕುಮಾರ್ ಅವರು ಮುಂದಾಗಿದ್ದಾರೆ. ಪ್ರತಿ ದಿನ ಐಪಿಎಸ್ ಅಧಿಕಾರಿಯಿಂದ ಜೈಲಿನಲ್ಲಿ ಮಾನಿಟರಿಂಗ್ ಮಾಡಲಾಗುತ್ತಿದೆ. ಸಿಬ್ಬಂದಿಗಳಿಂದ ಪ್ರತಿದಿನ ಜೈಲಿನಲ್ಲಿ ತಪಾಸಣೆ ನಡೆಯುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರು ಜೈಲಿನೊಳಗೆ ಮೊಬೈಲ್ ಪತ್ತೆ ಆಗುತ್ತಲೇ ಇದೆ. ಮೊಬೈಲ್ ಫೋನ್ಗಳಿಗೆ ಕಡಿವಾಣ ಹಾಕಲು ಐಪಿಎಸ್ ಅಧಿಕಾರಿ ಹರಸಾಹಸ ಮಾಡುತ್ತಿದ್ದಾರೆ. ಜೈಲಿನಲ್ಲಿ ಮೊಬೈಲ್ ಸಿಗುತ್ತಿದ್ದಂತೆಯೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಸಾಲು ಸಾಲು ಕೇಸ್ ದಾಖಲಾಗುತ್ತಿವೆ. ಅಂಶು ಕುಮಾರ್ ಅವರ ಕಠಿಣ ಕ್ರಮದಿಂದ ದರ್ಶನ್ ಅವರಿಗೂ ಸಂಕಷ್ಟ ಶುರುವಾಗಿದೆ.

ಸದ್ಯಕ್ಕೆ ದರ್ಶನ್ ಅವರಿಗೆ ವಾಕಿಂಗ್ ಮಾಡಲು ಅವಕಾಶ ಇಲ್ಲ. ರೂಮಿಗೆ ಬರುತ್ತಿದ್ದ ಊಟ, ತಿಂಡಿ ಕೂಡ ಬಂದ್ ಆಗಿದೆ. ದರ್ಶನ್ ಈಗ ತಾವೇ ಹೋಗಿ ಊಟ, ತಿಂಡಿ ತರಬೇಕಿದೆ. ಈ ಮೊದಲು ಜೈಲಿನ ಸಿಬ್ಬಂದಿಯೇ ದರ್ಶನ್ ಕೊಠಡಿಗೆ ಊಟ, ತಿಂಡಿ ತಂದು ಕೊಡುತ್ತಿದ್ದರು. ಈಗ ಅದನ್ನು ಬಂದ್ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

7 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

7 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

7 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

10 hours ago