ರಾಜ್ಯ

ಜೈಲಿನಲ್ಲಿ ಕಠಿಣ ನಿಯಮ ಜಾರಿ : ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅದನ್ನು ಕೂಡ ನಿರಾಕರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ನಡೆದಿರುವುದು ಪದೇಪದೇ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಜೈಲಿನಲ್ಲಿ ಬದಲಾವಣೆ ತರಲು ಅಂಶು ಕುಮಾರ್ ಅವರು ಮುಂದಾಗಿದ್ದಾರೆ. ಪ್ರತಿ ದಿನ ಐಪಿಎಸ್ ಅಧಿಕಾರಿಯಿಂದ ಜೈಲಿನಲ್ಲಿ ಮಾನಿಟರಿಂಗ್ ಮಾಡಲಾಗುತ್ತಿದೆ. ಸಿಬ್ಬಂದಿಗಳಿಂದ ಪ್ರತಿದಿನ ಜೈಲಿನಲ್ಲಿ ತಪಾಸಣೆ ನಡೆಯುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರು ಜೈಲಿನೊಳಗೆ ಮೊಬೈಲ್ ಪತ್ತೆ ಆಗುತ್ತಲೇ ಇದೆ. ಮೊಬೈಲ್ ಫೋನ್ಗಳಿಗೆ ಕಡಿವಾಣ ಹಾಕಲು ಐಪಿಎಸ್ ಅಧಿಕಾರಿ ಹರಸಾಹಸ ಮಾಡುತ್ತಿದ್ದಾರೆ. ಜೈಲಿನಲ್ಲಿ ಮೊಬೈಲ್ ಸಿಗುತ್ತಿದ್ದಂತೆಯೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಸಾಲು ಸಾಲು ಕೇಸ್ ದಾಖಲಾಗುತ್ತಿವೆ. ಅಂಶು ಕುಮಾರ್ ಅವರ ಕಠಿಣ ಕ್ರಮದಿಂದ ದರ್ಶನ್ ಅವರಿಗೂ ಸಂಕಷ್ಟ ಶುರುವಾಗಿದೆ.

ಸದ್ಯಕ್ಕೆ ದರ್ಶನ್ ಅವರಿಗೆ ವಾಕಿಂಗ್ ಮಾಡಲು ಅವಕಾಶ ಇಲ್ಲ. ರೂಮಿಗೆ ಬರುತ್ತಿದ್ದ ಊಟ, ತಿಂಡಿ ಕೂಡ ಬಂದ್ ಆಗಿದೆ. ದರ್ಶನ್ ಈಗ ತಾವೇ ಹೋಗಿ ಊಟ, ತಿಂಡಿ ತರಬೇಕಿದೆ. ಈ ಮೊದಲು ಜೈಲಿನ ಸಿಬ್ಬಂದಿಯೇ ದರ್ಶನ್ ಕೊಠಡಿಗೆ ಊಟ, ತಿಂಡಿ ತಂದು ಕೊಡುತ್ತಿದ್ದರು. ಈಗ ಅದನ್ನು ಬಂದ್ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago