ರಾಜ್ಯ

ಬ್ಯೂಟಿ ಪಾರ್ಲರ್‌, ಸಲೂನ್ ಸೆಂಟರ್​ಗಳಿಗೆ ಬರಲಿದೆ ಕಠಿಣ ನಿಯಮ

ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ

ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆದು ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಇದೀಗ ಬ್ಯೂಟಿ ಪಾರ್ಲರ್‌, ಸಲೂನ್ ಸೆಂಟರ್​ಗಳಿಗೆ ಕಠಿಣ ನಿಯಮಗಳನ್ನೊಳಗೊಂಡ ಮಾರ್ಗಸೂಚಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಅನೇಕ ಸಲೂನ್​​ಗಳಲ್ಲಿ, ಬ್ಯೂಟಿ ಪಾರ್ಲರ್‌ಗಳಲ್ಲಿ ಪ್ರಮಾಣಪತ್ರ ಇಲ್ಲದವರು ಕೂಡಾ ಕೆಲಸ ಮಾಡುತ್ತಿದ್ದಾರೆ. ಫೇಶಿಯಲ್ ಸೇರಿದಂತೆ ಚರ್ಮಕ್ಕೆ ಸಂಬಂಧಿಸಿದ ಅನೇಕ ಚಿಕಿತ್ಸೆಗಳನ್ನು ಜನರು ಪಡೆಯುತ್ತಾರೆ. ಆದರೆ, ಅದೆಷ್ಟೋ ಕಡೆಗಳಲ್ಲಿ ಪರಿಣತರಿಲ್ಲದೆಯೇ, ಪಾರ್ಲರ್‌ ಹೆಸರಿನಲ್ಲಿ ಶಾಪ್​ಗಳು ನಾಯಿಕೊಡೆಗಳಂತೆ ಎತ್ತಿವೆ. ಇವುಗಳಲ್ಲಿ ಯಾವುದು ನಕಲಿ, ಯಾವುದು ಅಸಲಿ ಎಂಬುದು ತಿಳಿಯದೆ ಜನರು ಚಿಕಿತ್ಸೆಗೆಂದು ತೆರಳುತ್ತಾರೆ. ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಅನೇಕ ಕಡೆ ಬ್ಯೂಟಿ ಪಾರ್ಲರ್, ಸಲೂನ್ ಸೆಂಟರ್, ಸ್ಕಿನ್ ಸೆಂಟರ್ ಎಂದು ಬೇಕಾಬಿಟ್ಟಿ ಚಿಕಿತ್ಸೆ ನೀಡುವ ಅನೇಕ ಶಾಪ್​ಗಳಿವೆ. ಕೆಲವು ಬ್ಯೂಟಿ ಪಾರ್ಲರ್​​​ಗಳು ಹಾನಿಕಾರಕ ಸ್ಟೀರಾಯ್ಡ್ ಬೇಸ್ಡ್ ಔಷಧ, ಕ್ರೀಮ್ ಹಾಗೂ ಕಾಸ್ಮೆಟಿಕ್ಸ್ ಬಳಕೆ ಮಾಡಿಕೊಂಡು ಜನರ ಆರೋಗ್ಯಕ್ಕೆ ಸಂಚಾಕರ ತರುತ್ತಿವೆ.

ಸಲೂನ್ ಸೆಂಟರ್​​ಗಳಲ್ಲಿಯೂ ಕೂಡಾ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಪ್ರಾಕ್ಟಿಸ್​​ಗಳನ್ನು ಮಾಡಿ ಜನರ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಎಂಬಿಬಿಎಸ್ ಪ್ರಾಕ್ಟೀಸ್ ಮಾಡದೇ ಬ್ಯೂಟಿ ಕ್ಲಿನಿಕ್​ಗಳಲ್ಲಿ ಕೆಲವರು ರಾಸಾಯನಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಯಲ್ಲಿ MD, DNB, DVL, DDV ಹಾಗೂ Mch, ಪ್ಲಾಸ್ಟಿಕ್ ಸರ್ಜರಿ ಪಿ.ಜಿ ಅರ್ಹತೆ ಇಲ್ಲದೇ ಚಿಕಿತ್ಸೆ ಕೊಡುತ್ತಿದ್ದಾರೆ.

ಇದರಿಂದ ಅನೇಕರು ಚರ್ಮ ಸಂಬಂಧಿ ಸಮಸ್ಯೆ‌ಗಳಿಂದ ಬಳಲುತ್ತಿದ್ದಾರೆ. ಪ್ರಾಣಕ್ಕೂ ಸಂಚಕಾರ ತಂದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕುವುದಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ಸಲೂನ್ ಸೆಂಟರ್, ಮಸಾಜ್ ಸೆಂಟರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆಗೆ ಮುಂದಾಗಿದೆ. ಸಾಕಷ್ಟು ದೂರುಗಳು ಬಂದ ಕಾರಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಡರ್ಮಟಾಲಿಸ್ಟ್ ಅಸೋಸಿಯೇಷನ್ ಇಲಾಖೆಯ ನಿರ್ಧಾರವನ್ನು ಸ್ವಾಗತಿಸಿದೆ. ಈ ಹಿಂದೆಯೂ ಕೂಡಾ ಅನೇಕ ಬಾರಿ ಆರೋಗ್ಯ ಇಲಾಖೆಗೆ ಅಸೋಸಿಯೇಷನ್‌ನಿಂದ ದೂರನ್ನು ನೀಡಲಾಗಿತ್ತು. ಮಾರ್ಗಸೂಚಿಯಿಂದ ಜನರಿಗೆ ಹಣ ಉಳಿಯುವುದರ ಜೊತೆಗೆ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು ಎಂದು ಚರ್ಮ ರೋಗ ತಜ್ಞರ ಸಂಘಟನೆಯ ಸದಸ್ಯ ಜಗದೀಶ್ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ, ಮಾರ್ಗಸೂಚಿಗೆ ಎಲ್ಲಾ ರೀತಿಯ ತಯಾರಿ ಮಾಡಲಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಲೂನ್, ಬ್ಯೂಟಿಪಾರ್ಲರ್‌ಗಳಿಗೆ ನಿಯಮ ಜಾರಿಯಾಗಲಿದೆ. ಉಲ್ಲಂಘಿಸಿದಲ್ಲಿ, ಪರವಾನಗಿ ರದ್ದು ಮಾಡಲು ಕೂಡಾ ಚಿಂತನೆ ನಡೆಯುತ್ತಿದೆ.

ಆಂದೋಲನ ಡೆಸ್ಕ್

Recent Posts

ಡಿನ್ನರ್‌ ಮೀಟಿಂಗ್‌ ಶಕ್ತಿ ಪ್ರದರ್ಶನವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…

6 mins ago

ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…

16 mins ago

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

2 hours ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

2 hours ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

2 hours ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

3 hours ago