ಬೆಂಗಳೂರು: ಅತ್ತ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ರಾಜ್ಯದಲ್ಲಿಯೂ ಸಹ ನಿನ್ನೆ(ಆ.17) ಸಾವಿರಾರು ವೈದ್ಯರು, ಯುವತಿಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ಕತ್ತಲಲ್ಲಿ ಕ್ಯಾಂಡಲ್ ಹಿಡಿದು ಮಹಿಳೆಯರ ಸುರಕ್ಷತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಈ ನಡುವೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದುಹೋಗಿದ್ದು, ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವಾಗಿದೆ.
ನಗರದ ಕೋರಮಂಗಲದ ಪಬ್ನಿಂದ ಮಧ್ಯರಾತಿ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಮೂಲಕ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಅಪಘಾತವಾಗಿದೆ. ಬಳಿಕ ಯುವತಿ ಬೈಕ್ ಬಿಟ್ಟು ಆಟೋದಲ್ಲಿ ಮನೆಗೆ ತೆರಳಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ.
ಆಟೋ ಹತ್ತಿದ ಯುವತಿಯನ್ನು ಹೆಚ್ಎಸ್ಆರ್ ಲೇಔಟ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ. ಈ ಬಗ್ಗೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…