ರಾಜ್ಯ

ಬಾತ್‌ರೂಂನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ; ಅನುಮಾನಾಸ್ಪದ ಸಾವು ಕೇಸ್‌ ದಾಖಲು

ಬೆಂಗಳೂರು: ರಾಜ್ಯದಲ್ಲಿ ಹುಬ್ಬಳಿಯ ನೇಹಾ, ಅಂಜಲಿ ಕೊಡಗಿನ ಮೀನಾ ಕೊಲೆ ಪ್ರಕರಣ ಮಾಸುವೆ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

೨೧ ವರ್ಷದ ವಿದ್ಯಾರ್ಥಿನಿ ಪ್ರಭುದ್ಧಳ ಮೃತದೇಹ ಮನೆಯ ಬಾತ್‌ರೂಂನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಅನುಮಾನಾಸ್ಪದ ಸಾವು ಕೇಸ್‌ ದಾಖಲಿಸಿ, ಮೃತ ಯುವತಿಯ ಮೊಬೈಲ್‌ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನನ್ನ ಮಗಳನ್ನು ಜೋಪಾನ ಮಾಡಿದ್ದೆ ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ. ಆಫೀಸ್‌ನಲ್ಲಿದ್ದ ನನಗೆ ಮಧ್ಯಾಹ್ನ ಫೋನ್‌ ಮಾಡಿದ್ದಳು. ಸ್ನೇಹಿತರ ಜೊತೆ ಪಾನಿಪುರಿ ತಿಂದು ಮನೆಗೆ ಹೋಗ್ತಿನಿ ಎಂದಿದ್ದಳು. ನಂತರ ಆಫೀಸ್‌ ಮುಗಿಸಿ ಬಂದು ನೋಡಿದಾಗ ಮಗಳು ಬಾತ್‌ರೂಂನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಇತ್ತು ಎಂದು ಘಟನೆ ಕುರಿತು ತಾಯಿ ಸೌಮ್ಯ ಕಣ್ಣೀರು ಹಾಕಿದ್ದಾರೆ.

ಪ್ರಭುದ್ಧ ಈ ಹಿಂದೆ ಎರಡು-ಮೂರು ಬಾರಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗುತ್ತಿದೆ. ಆದರೆ ತಾಯಿ ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳಲ್ಲ ಎಂದು ತಾಯಿ ಸೌಮ್ಯ ಗೋಳಾಡಿದ್ದಾರೆ.

೨೧ ವರ್ಷದ ವಿದ್ಯಾರ್ಥಿಯ ಕೈ ಹಾಗೂ ಕುತ್ತಿಗೆಗೆ ಚಾಕು ಇರಿತ ಆಗಿದೆ. ಮನೆಯ ಬಾತ್‌ರೂಂನಲ್ಲಿ ಈ ಘಟನೆ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿದು ಬಂದಿಲ್ಲ. ಇದು ತನಿಖೆಯಿಂದ ಗೊತ್ತಾಗುತ್ತದೆ. ಕೇಸ್‌ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

3 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

5 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

6 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

6 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

6 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

8 hours ago