ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶುಚಿ ಯೋಜನೆಗೆ ಗ್ರಹಣ ಹಿಡಿದಿರುವಂತೆ ಕಾಣುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಶುಚಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಆದರೆ ಇದು ಕೇವಲ ಹೆಸರಿಗಷ್ಟೆ ಯೋಜನೆ ಇದೆ ಹೊರತು ಕಾರ್ಯರೂಪಕ್ಕೆ ಮಾತ್ರ ಬರುತ್ತಿಲ್ಲ.
ಸರ್ಕಾರಿ ಹಾಗೂ ಅನುದಾನಿತ ಕಾಲೇಜು ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸಲಾಗುತ್ತಿತ್ತು. ಆದರೆ ಕೊರೋನಾ ಬಂದಂತಹ ಸಂದರ್ಭದಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆಯನ್ನ ಸ್ಥಗಿತಗೊಳಿಸಲಾಯಿತು.
ಬಳಿಕ ಫೆಬ್ರವರಿ ತಿಂಗಳಿನಿಂದ ಯೋಜನೆ ಪುನರಾರಂಭಗೊಳಿಸಿದ್ರೂ ಕೂಡ ರಾಜ್ಯ ವೈದ್ಯಕೀಯ ಸರಬರಾಜು ನಿಮಮದ ವತಿಯಿಂದ ವಿದ್ಯಾರ್ಥಿನಿಯರ ಕೈಗೆ ಸ್ಯಾನಿಟರಿ ಪ್ಯಾಡ್ ಮಾತ್ರ ಸಿಗುತ್ತಿಲ್ಲ. ಚುನಾವಣೆ ನೆಪವೊಡ್ಡಿ ಕಳೆದ 4 ತಿಂಗಳಿನಿಂದ ಈ ಯೋಜನೆ ಹಳ್ಳ ಹಿಡಿದೇ ಕೂತಿದ್ದು, ಸ್ಯಾನಿಟರಿ ಪ್ಯಾಡ್ ಸಿಗದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.
ಈಗಾಗಲೇ ಎಲ್ಲೆಡೆ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು, ಇನ್ನಾದ್ರೂ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿನಿಯರಿಗೆ ಶುಚಿ ಸ್ಯಾನಿಟರಿ ಪ್ಯಾಡ್ ವಿತರಿಸುವ ವ್ಯವಸ್ಥೆ ಮಾಡುತ್ತಾರಾ ಎಂಬುವುದನ್ನ ಕಾದಷ್ಟೆ ನೋಡಬೇಕಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…