ರಾಜ್ಯ

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ.

ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಮುದ್ರದಲ್ಲಿ ಆಟವಾಡಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ.

ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರು ಪಾಲಾಗಿದ್ದು, ಸ್ಥಳೀಯರ ಸಹಕಾರದಿಂದ ಮೂವರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕನನ್ನು ರಕ್ಷಣೆ ಮಾಡಲಾಗಿದೆ.

ನಿನ್ನೆ ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾದರೆ, ಇಂದು ಉಳಿದ ಮೂವರ ಮೃತದೇಹಗಳು ಪತ್ತೆಯಾಗಿವೆ. ಈ ದುರ್ಘಟನೆಯ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ಈ ಕುರಿತು ತ್ವರಿತ ನಿರ್ಧಾರ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಕಡಲತೀರ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದಾಗಿ ತಿಳಿದುಬಂದಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

7 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

3 hours ago