ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ.
ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಮುದ್ರದಲ್ಲಿ ಆಟವಾಡಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ.
ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರು ಪಾಲಾಗಿದ್ದು, ಸ್ಥಳೀಯರ ಸಹಕಾರದಿಂದ ಮೂವರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕನನ್ನು ರಕ್ಷಣೆ ಮಾಡಲಾಗಿದೆ.
ನಿನ್ನೆ ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾದರೆ, ಇಂದು ಉಳಿದ ಮೂವರ ಮೃತದೇಹಗಳು ಪತ್ತೆಯಾಗಿವೆ. ಈ ದುರ್ಘಟನೆಯ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲಾಡಳಿತ ಈ ಕುರಿತು ತ್ವರಿತ ನಿರ್ಧಾರ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಕಡಲತೀರ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದಾಗಿ ತಿಳಿದುಬಂದಿದೆ.
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…