ರಾಜ್ಯ

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಮೃತ್ಯು ಪ್ರಕರಣ: ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಭಟ್ಕಳ: ಮುರುಡೇಶ್ವರ ಕಡಲ ತೀರದಲ್ಲಿ ಶಾಲಾ ಪ್ರವಾಸಕ್ಕೆಂದು ಬಂದ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಧಾರುಣ ಘಟನೆ ನಡೆದಿದೆ.

ಘಟನೆ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಪ್ರವಾಸಕ್ಕಾಗಿ ಮುರುಡೇಶ್ವರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಮುದ್ರದಲ್ಲಿ ಆಟವಾಡಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ.

ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರು ಪಾಲಾಗಿದ್ದು, ಸ್ಥಳೀಯರ ಸಹಕಾರದಿಂದ ಮೂವರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕನನ್ನು ರಕ್ಷಣೆ ಮಾಡಲಾಗಿದೆ.

ನಿನ್ನೆ ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾದರೆ, ಇಂದು ಉಳಿದ ಮೂವರ ಮೃತದೇಹಗಳು ಪತ್ತೆಯಾಗಿವೆ. ಈ ದುರ್ಘಟನೆಯ ಬಳಿಕ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ಈ ಕುರಿತು ತ್ವರಿತ ನಿರ್ಧಾರ ಕೈಗೊಂಡಿದ್ದು, ಮುಂದಿನ ಆದೇಶದವರೆಗೆ ಕಡಲತೀರ ಪ್ರವಾಸಿಗರಿಗೆ ನಿರ್ಬಂಧ ಹೇರಿರುವುದಾಗಿ ತಿಳಿದುಬಂದಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

3 mins ago

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

12 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

12 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

12 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago