ರಾಜ್ಯ

ಚಾರ್ಜ್ ಶೀಟ್ ಸಲ್ಲಿಕೆ, ದರ್ಶನ್ ಪಾತ್ರ ಏನು.?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಸಹಚರರ ವಿರುದ್ಧ  3,991 ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಇದರಲ್ಲಿ ಕೊಲೆಯ ಸಂಪೂರ್ಣ ವಿವರ ಒಳಗೊಂಡಿದೆ.

ನಟ ದರ್ಶನ್ ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು, ಅವರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಚಾರ್ಜ್ ಶೀಟ್ ನಲ್ಲಿ, ದರ್ಶನ್ ಕಿಡ್ನಾಪ್, ಹಲ್ಲೆ, ಮತ್ತು ಕೊಲೆ ನಂತರ ಹಣ ನೀಡಿ ಪ್ರಕರಣವನ್ನು ಮುಚ್ಚಿಸುವ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ ಎಂಬ ಮತ್ತಿತರ ವಿವರಗಳಿವೆ.

ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಹಾಜರಿದ್ದರು ಮತ್ತು ಸ್ಥಳದಿಂದ ಪರಾರಿಯಾದ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅವರ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತವು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಕೂಡ ದೊರೆತಿವೆ. ಈ ಮಾಹಿತಿಯು ಕೋರ್ಟ್ ವಿಚಾರಣೆಯಲ್ಲಿ ಬಹಳ ಮುಖ್ಯವಾಗಿದೆ. ದರ್ಶನ್  ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗವಹಿಸಿದ್ದ ಕುರಿತು ಚಾರ್ಜ್ ಶೀಟ್ ನಲ್ಲಿ ದೃಢಪಡಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

27 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

2 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

2 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

2 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

2 hours ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

2 hours ago