ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರ ವಿರುದ್ಧ 3,991 ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಇದರಲ್ಲಿ ಕೊಲೆಯ ಸಂಪೂರ್ಣ ವಿವರ ಒಳಗೊಂಡಿದೆ.
ನಟ ದರ್ಶನ್ ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು, ಅವರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಚಾರ್ಜ್ ಶೀಟ್ ನಲ್ಲಿ, ದರ್ಶನ್ ಕಿಡ್ನಾಪ್, ಹಲ್ಲೆ, ಮತ್ತು ಕೊಲೆ ನಂತರ ಹಣ ನೀಡಿ ಪ್ರಕರಣವನ್ನು ಮುಚ್ಚಿಸುವ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ ಎಂಬ ಮತ್ತಿತರ ವಿವರಗಳಿವೆ.
ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಹಾಜರಿದ್ದರು ಮತ್ತು ಸ್ಥಳದಿಂದ ಪರಾರಿಯಾದ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅವರ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತವು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಕೂಡ ದೊರೆತಿವೆ. ಈ ಮಾಹಿತಿಯು ಕೋರ್ಟ್ ವಿಚಾರಣೆಯಲ್ಲಿ ಬಹಳ ಮುಖ್ಯವಾಗಿದೆ. ದರ್ಶನ್ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗವಹಿಸಿದ್ದ ಕುರಿತು ಚಾರ್ಜ್ ಶೀಟ್ ನಲ್ಲಿ ದೃಢಪಡಿಸಲಾಗಿದೆ.
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…