ರಾಜ್ಯ

ಇ.ಡಿ.ಸಮನ್ಸ್‌ ವಿರುದ್ಧ ರಿಟ್‌ ಅರ್ಜಿ ಸಲ್ಲಿಕೆ: ಫೆ.20ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಧಾರವಾಡ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ನೀಡಿದ ಸಮನ್ಸ್‌ಗೆ ಆಕ್ಷೇಪಿಸಿ ರದ್ದುಗೊಳಿಸುವಂತೆ ಸಚಿವ ಬೈರತಿ ಸುರೇಶ್‌ ಹಾಗೂ ಪಾರ್ವತಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಫೆಬ್ರವರಿ.20ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.10) ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವೂ ವಿಚಾರಣೆ ನಡೆಸಿದ ಬಳಿಕ ವಾದ ಆಲಿಸಿದರು. ಪ್ರತಿವಾದಕ್ಕೆ ಇ.ಡಿ. ಪರ ವಕೀಲ ಅರವಿಂದ ಕಾಮತ್‌ ಕಾಲಾವಕಾಶ ಕೇಳಿದ್ದರಿಂದ ಈ ಅರ್ಜಿ ವಿಚಾರಣೆಯನ್ನು ಫೆ.20ರಂದು ನಡೆಸಲಾಗುವುದು ಎಂದು ಹೇಳಿದೆ.

ಇನ್ನೂ ಈ ಅರ್ಜಿ ವಿಚಾರಣೆಯನ್ನು 10 ದಿನಗಳ ಕಾಲ ಮುಂದೂಡಿರುವುದರಿಂದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ತಾತ್ಕಲಿಕ ರಿಲೀಫ್‌ ಸಿಕ್ಕಿದೆ.

ಸಚಿವ ಬೈರತಿ ಸುರೇಶ್‌ ಪರ ವಕೀಲರ ವಾದವೇನು?

ಇಂದು ಹೈಕೋರ್ಟ್‌ನಲ್ಲಿ ಸಚಿವ ಬೈರತಿ ಸುರೇಶ್‌ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ಸುರೇಶ್‌ ಅವರು ನಗರಾಭಿವೃದ್ಧಿ ಸಚಿವರಾಗಿ ಆಯ್ಕೆಯಾಗಿರುವುದು 2023ರಲ್ಲಿ. ಮುಡಾದಲ್ಲಿ ಹಗರಣ ನಡೆದಾಗ ಬೈರತಿ ಸುರೇಶ್‌ ಅವರು ಯಾವುದೇ ಹುದ್ದೆಯಲ್ಲಿರಲಿಲ್ಲ. ಅಲ್ಲದೇ 14 ನಿವೇಶನಗಳ ಹಂಚಿಕೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಹೀಗಿದ್ದರೂ ಇ.ಡಿ.ಅಧಿಕಾರಿಗಳು ಸಮನ್ಸ್‌ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪಾರ್ವತಿ ಸಿದ್ದರಾಮಯ್ಯ ಅವರ ಪರ ವಕೀಲರ ವಾದವೇನು?

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಪರ ವಕೀಲ ಸಂದೇಶ್‌ ಚೌಟ ಅವರು, ಮುಡಾ ಹಗರಣಕ್ಕೆ ಕಾರಣವಾಗಿರುವ 50:50 ಅನುಪಾತದ ಬದಲಿ ನಿವೇಶನಗಳನ್ನು ಮುಡಾ ಮಾಜಿ ಆಯುಕ್ತ ನಟೇಶ್‌ ಕುಮಾರ್‌ ಅವರು ಆಯುಕ್ತರಾಗಿದ್ದಾಗ ನೀಡಿದ್ದಾರೆ ಎಂದು ಇ.ಡಿ. ಅಧಿಕಾರಿಗಳು ಹೇಳುತ್ತಾರೆ. ಆದರೆ ನಟೇಶ್‌ ಅವರ ವಿರುದ್ಧ ಇ.ಡಿ.ಸಂಸ್ಥೆಯೂ ನೀಡಿರುವ ಸಮನ್ಸ್‌ ಅನ್ನು ಕೋರ್ಟ್‌ ರದ್ದುಗೊಳಿಸಿದೆ ಎಂದು ಅನ್ವಯಿಸಿ ವಾದ ಮಂಡಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago