Kodagu rain
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ ಕೇಳಿ ಬಂದಿದೆ. ಈ ಭಾರಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರೈತರು ಕಾತುರದಿಂದ ಕಾಯುತ್ತಿದ್ದಾರೆ.
ಎರಡು ದಿನದ ಹಿಂದೆ ಆನಿಕಲ್ಲು ಮಳೆಯಾಗಿತ್ತು. ಜೊತೆಗೆ ಈ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಾಕಷ್ಟು ನಷ್ಟ ಎದುರಾಗಿತ್ತು. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ ಇದ್ದು, ರಾಜ್ಯದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
18 ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದ್ದು, ರಾಯಚೂರು, ಕೊಪ್ಪ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಬೆಂಗಳೂರು ದಕ್ಷಿಣ, ಕೋಲಾರ, ಬೆಂಗಳೂರು ಗ್ರಾಮಾಂತರ, ಮತ್ತು ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕೆಲ ಭಾಗಗಳಲ್ಲಿ ಆಲಿಕಲ್ಲು ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಮಳೆ ಜೊತೆಗೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಮಾನ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡದ ಕಲಘಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಿಮಪಾತದ ಬಿದ್ದಂತಹ ಅನುಭವವಾಗಿತ್ತು. ಜಿಲ್ಲೆ ವ್ಯಾಪ್ತಿಯಲ್ಲಿ ಮಾವು, ಬಾಳೆ ಬೆಳೆಗಾರರಿಗೆ ತೊಂದರೆ ಆಯಿತು. ಆಲಿಕಲ್ಲು ಮಳೆಗೆ ಬೆಳೆ ಹಾನಿಗೊಂಡಿತ್ತು. ಒಟ್ಟು 450 ಎಕರೆ ಬೆಳೆ ಹಾನಿ ಆಗಿದೆ. ಬಾಗಲಕೋಟೆಯಲ್ಲಿ 2400 ಎಕರೆ ತೋಟಗಾರಿಕೆ ಮಳೆ ಹಾನಿ ಉಂಟಾಗಿದೆ. ಚಿಕ್ಕಬಳ್ಳಾಪುರದಲ್ಲಿ 2.5 ರೂಪಾಯಿ ಮೌಲ್ಯದ ಬೆಳೆಹಾನಿ ಅಗಿದ್ದರೆ, ಬೆಳಗಾವಿಯಲ್ಲಿ 150 ಎಕರೆ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಬಿರುಗಾಳಿ ಮಳೆಗೆ ನೆಲಕಚ್ಚಿವೆ. ಯಾದಗಿರಿ ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಜೋಳ, ಭತ್ತದ ಬೆಳೆಗಳು ಅಕಾಲಿಕ ಮಳೆಗೆ ಸಿಲುಕಿ ಇಳುವರಿ ಕಳೆದುಕೊಂಡಿವೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…