ರಾಜ್ಯ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಸುಧಾಮೂರ್ತಿ ದಂಪತಿ ನಿರಾಕರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.

ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಅಕ್ಟೋಬರ್.10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ.

ಇದನ್ನು ಓದಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಶೇ.77.86 ಪ್ರಗತಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ದಂಪತಿ ತಿಳಿಸಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಅವರ ನಿವಾಸವಿದ್ದು, ಇಬ್ಬರೂ ಕರ್ನಾಟಕದ ನಿವಾಸಿಗಳಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ತೀರ್ಪು ನೀಡಿರುವುದರಿಂದ ದಂಪತಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ಜಯನಗರ 4ನೇ ಟಿ ಬ್ಲಾಕ್‍ನಲ್ಲಿರುವ ತಮ ನಿವಾಸದಲ್ಲಿ ಸಮೀಕ್ಷೆಗೆ ಹೋದ ಗಣತಿದಾರರಿಗೆ ಅವರು ಯಾವುದೇ ಹಿಂದುಳಿದ ಜಾತಿಗೆ ಸೇರಿದವರಲ್ಲ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವುದಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago