ರಾಜ್ಯ

SUFC | ಇಂಟರ್‌ಸಿಟಿ ಫುಟ್ಬಾಲ್‌ ಪಂದ್ಯಾವಳಿಯಲ್ಲಿ ಪುಣೆ ಮೇಲುಗೈ

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಪುಣೆ ತಂಡ ಐದು ವಿಭಾಗದಲ್ಲಿ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಾಬ್‌ನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 ಯುವ ಫುಟ್ಬಾಲ್ ಆಟಗಾರರು ಭಾಗವಹಿಸಿದ್ದರು. ಪುಣೆ ತಂಡಗಳು ಐದು ವಿಭಾಗಗಳಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದು ಬೀಗಿದರೆ, ಬೆಂಗಳೂರು ತಂಡ ಒಂದು ಪ್ರಶಸ್ತಿಗೆ ತೃಪ್ತಿಪಟ್ಟಿಕೊಂಡಿದೆ.

ಪುಣೆ ತಂಡ ಅಂಡರ್-9,11, 13,15 ನಲ್ಲಿ ಪ್ರಶಸ್ತಿಗಳನ್ನು ಗೆದಿದ್ದೆ. ಅಂಡರ್-17 ನಲ್ಲಿ ಬೆಂಗಳೂರಿನ ಎಸ್‌ಯುಎಫ್‌ಸಿ ಪಿಲ್ಲರ್ಸ್ ಜಯ ಸಾಧಿಸಿದೆ. ಜೊತೆಗೆ ಪುಣೆ ತಂಡವು ಅತ್ಯುತ್ತಮ ಗೋಲ್ ಕೀಪರ್, ಉದಯೋನ್ಮುಖ ಆಟಗಾರ ಹಾಗು ಅತ್ಯುತ್ತಮ ಕೋಚ್ ಗಳಿಗೆ ವೈಯಕ್ತಿವಾಗಿ ನೀಡಿದ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದೆ.

ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ:
ಅಂಡರ್-9
ಅತ್ಯುತ್ತಮ ಗೋಲ್ ಕೀಪರ್: ಅಗಸ್ತ್ಯ ಸುರೇಶ್ (ಬೆಂಗಳೂರು)
ಅತ್ಯುತ್ತಮ ಆಟಗಾರ: ಏಕಂ ಸಿಂಗ್ (ಪುಣೆ)
ಉದಯೋನ್ಮುಖ ಆಟಗಾರ: ಆಸ್ಟಿನ್ ಲೋರೀಗ್ಗಿಯೋ (ಬೆಂಗಳೂರು), ನೋರಾ ಗುಪ್ತ (ಪುಣೆ)
ಅತ್ಯುತ್ತಮ ಕೋಚ್: ರಿಯಾನ್ ಯಾದಗಿರಿ (ಪುಣೆ), ನವೀನ್ ಕುಮಾರ್ (ಬೆಂಗಳೂರು)

ಅಂಡರ್-11
ಅತ್ಯುತ್ತಮ ಗೋಲ್ ಕೀಪರ್: ಅರ್ಹತ್ವ ಡೋಂಗ್ರೆ (ಪುಣೆ)
ಅತ್ಯುತ್ತಮ ಆಟಗಾರ: ಅವ್ಯುಕ್ತ್ ನಂದಿ (ಪುಣೆ)
ಉದಯೋನ್ಮುಖ ಆಟಗಾರ: ಕಬೀರ್ ದೂತ್ (ಪುಣೆ), ಶನಯಾ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರತಿಕ್ಷ ದೇವಾಂಗ್ (ಪುಣೆ), ಉಮಾಶಂಕರ್ (ಬೆಂಗಳೂರು)

ಅಂಡರ್-13
ಅತ್ಯುತ್ತಮ ಗೋಲ್ ಕೀಪರ್: ದಿಯಾನ್ ಗೋಯಲ್ (ಪುಣೆ)
ಅತ್ಯುತ್ತಮ ಆಟಗಾರ: ಜೆಡೆನ್ ಜೋಸೆಫ್ (ಬೆಂಗಳೂರು)
ಉದಯೋನ್ಮುಖ ಆಟಗಾರ: ಡೆಲಿಝ ಉನ್ವಾಲ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರಬುದ್ಧ ಗೈಕ್ವಾಡ್ (ಪುಣೆ), ಅದಿತಿ ಪಿ ಜಾಧವ್ (ಬೆಂಗಳೂರು)

ಅಂಡರ್-15
ಅತ್ಯುತ್ತಮ ಗೋಲ್ ಕೀಪರ್: ಸಿದ್ದಾರ್ಥ್ ಗುಪ್ತ (ಬೆಂಗಳೂರು)
ಅತ್ಯುತ್ತಮ ಆಟಗಾರ: ಅರ್ಪಿತ್ ಮಿಶ್ರಾ (ಪುಣೆ)
ಅತ್ಯುತ್ತಮ ಕೋಚ್: ಸಿದ್ದಾರ್ಥ್ ಮಿಶ್ರಾ (ಬೆಂಗಳೂರು), ಮೊಹಸಿನ್ ಅಬ್ದುಲ್ಲಾ ತಂಬೋಲಿ (ಪುಣೆ)

ಅಂಡರ್-17
ಅತ್ಯುತ್ತಮ ಆಟಗಾರ: ಹರ್ಷಿತ್ ಎಸ್ ವಿ (ಬೆಂಗಳೂರು)

ಸೌತ್ ಯುನೈಟೆಡ್ ಸ್ಪೋರ್ಟ್ಸ್ ಫೌಂಡೇಶನ್‌ನ ಕ್ರೀಡಾ ನಿರ್ದೇಶಕ ಟೆರಿ ಫಿಲನ್ ಪಂದ್ಯಾವಳಿ ಬಗ್ಗೆ ಮಾತನಾಡಿ, ಈ ಪಂದ್ಯಾವಳಿಯ ಉದ್ದೇಶ ಬೆಂಗಳೂರಿನಲ್ಲಿ ಯುವ ಆಟಗಾರರನ್ನು ಒಂದುಗೂಡಿಸುವುದು ಜೊತೆಗೆ ಇಂಟರ್-ಸಿಟಿ ಪಂದ್ಯಾವಳಿಯ ಅನುಭವವನ್ನು ನೀಡುವುದಾಗಿತ್ತು. ಆಟಗಾರರು, ಕೋಚ್ ಗಳು ಮತ್ತು ಪೋಷಕರು ಈ ಪಂದ್ಯಾವಳಿಯನ್ನು ಆನಂದಿಸಿದ್ದಾರೆ. ನಾವು ತಮಟ್ಟದಿಂದ ಫುಟ್ಬಾಲ್ ಆಟವನ್ನು ಬೆಳೆಸಲು ಪ್ರಯತ್ನಿಸುತ್ತಿದ್ದೇವೆ ಹಾಗು BDFA ಲೀಗ್‌ನಲ್ಲಿ ಆಡುವ ಮೊದಲ ತಂಡವನ್ನು ಕೂಡ ಪಡೆದುಕೊಂಡಿದ್ದೇವೆ. ಪುಣೆ ತಂಡವು ಬೆಂಗಳೂರು ಬಂದಿದ್ದು ಸಂತಸ ನೀಡಿದೆ. ಆಟಗಾರರಿಗೆ ಕ್ರೀಡೆ ಮಾನಸಿಕವಾಗಿ, ದೈಹಿಕವಾಗಿ ಸಹಾಯ ಮಾಡುತ್ತದೆ. ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಅದ್ಭುತ ವಸತಿ ಅಕಾಡೆಮಿಯನ್ನು ಕೂಡ ನಿರ್ಮಿಸುತ್ತಿದೆ ಎಂದು ಹೇಳಿದರು.

ಪಂದ್ಯಾವಳಿ ಹೊರತುಪಡಿಸಿ ಸೌತ್ ಯುನೈಟೆಡ್ ಸ್ಪೋರ್ಟ್ಸ್ ಫೌಂಡೇಶನ್‌ನ ಡೈರೆಕ್ಟರ್ ಟೆರಿ ಫಿಲನ್ ಭೇಟಿ, ಕ್ಲಬ್ ನ ಹಿರಿಯ ತಂಡದ ಆಟಗಾರರೊಂದಿಗೆ ಸಂವಾದ ಹಾಗು ಜನವರಿ 11 ರಂದು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಎಫ್‌ಸಿ ಮತ್ತು ಮೊಹಮ್ಮದನ್ ಎಸ್‌ಸಿ ನಡುವಿನ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಪಂದ್ಯದಲ್ಲಿ ಪುಣೆ ಹಾಗು ಬೆಂಗಳೂರು ತಂಡದ ಆಟಗಾರರು ಭಾಗವಹಿಸಿದ್ದರು.

ಈ ಪಂದ್ಯಾವಳಿಯು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಹೊಸ ವಸತಿ ಅಕಾಡೆಮಿ ಕಾರ್ಯಕ್ರಮಕ್ಕೆ ಸ್ಕೌಟಿಂಗ್ ವೇದಿಕೆಯಾಗಿ ಕೂಡ ಕಾರ್ಯನಿರ್ವಹಿಸಿದ್ದು, ಪಂದ್ಯಾವಳಿಯ ಅತ್ಯುತ್ತಮ ಆಟಗಾರರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿ ಆದ ಮೊದಲ ದಿನವೇ ಸಚಿವರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ…

11 mins ago

ಇರಾನ್‌ ಯುದ್ಧಕ್ಕೆ ಬ್ರೇಕ್‌ : ಯುಎಸ್‌ ಹೌಸ್‌ ನಿರ್ಣಯ ಅಂಗೀಕಾರ, ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್‌ : ಇರಾನ್‌ ವಿರುದ್ಧದ ಯುದ್ಧವನ್ನು ಡೊನಾಲ್ಡ್‌ ಟ್ರಂಪ್‌ ಮುಂದುವರಿಸದಂತೆ ತಡೆಯಲು ರಿಪಬ್ಲಿಕನ್‌ ನೇತೃತ್ವದ ಅಮೆರಿಕದ ಹೌಸ್‌ ಆಫ್‌ ರೆಪ್ರೆಸೆಂಟೀಟಿವ್ಸ್‌…

24 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ ; ಜೂನ್‌ 4 ಗುರುವಾರ

4 hours ago

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

16 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

17 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

18 hours ago