ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ.
ಪ್ರಸ್ತುತ ರಾಜ್ಯದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಮದ್ಯಾಂತರ ಪರಿಹಾರ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ಸಮಯ ನೀಡುವಂತೆ ಪಿಎಂ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಪತ್ರ ಬರೆಯಲಿದ್ದಾರೆ.
ಇದನ್ನು ಓದಿ: ನ.11ಕ್ಕೆ ಆರ್.ಎಸ್.ಎಸ್ ವಿರುದ್ಧ ʼದಸಂಸ ಪ್ರತಿರೋಧ ಸಮಾವೇಶʼ
ಸುದ್ದಿಗೋಷ್ಠಿಯಲ್ಲಿ ಸ್ವತಃ ಈ ವಿಷಯವನ್ನು ಅವರೇ ತಿಳಿಸಿದ್ದು, ಕಬ್ಬು ಬೆಳೆಗಾರರ ವಿಚಾರದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತುರ್ತಾಗಿ ಭೇಟಿಗೆ ಅವಕಾಶ ನೀಡಬೇಕೆಂದು ಪತ್ರ ಬರೆಯಲು ಹಾಗೂ ಪ್ರಧಾನ ಮಂತ್ರಿಗಳ ಕಛೇರಿಯನ್ನು ಸಂಪರ್ಕಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೂಡಲೇ ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಮುಖ್ಯವಾಗಿ ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ.ಆರ್.ಪಿ. ದರ ಪರಿಷ್ಕರಿಸುವುದು, ಸಕ್ಕರೆ ರಫ್ತು, ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಒತ್ತಾಯಿಸುವಂತೆ ಚರ್ಚಿಸಲಾಯಿತು ಎಂದರು
ಕೇಂದ್ರ ಸರ್ಕಾರವು ರಾಜ್ಯದ ವಿಚಾರದಲ್ಲಿ ನಡೆಸುತ್ತಿರುವ ಮಲತಾಯಿ ಧೋರಣೆಯು ರೈತರ ಅನ್ನದ ತಟ್ಟೆಯವರೆಗೂ, ರೈತರ ಭೂಮಿಯವರೆಗೂ ಬಂದಿದೆ. ಈ ವಿಚಾರದಲ್ಲಿ ನಾವು ಅಧಿಕಾರಕ್ಕೆ ಬಂದಾಗಿನಿಂದ ಧ್ವನಿ ಎತ್ತುತ್ತಿದ್ದೇವೆ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…