ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ.
ಪ್ರಸ್ತುತ ರಾಜ್ಯದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಮದ್ಯಾಂತರ ಪರಿಹಾರ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ಸಮಯ ನೀಡುವಂತೆ ಪಿಎಂ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಪತ್ರ ಬರೆಯಲಿದ್ದಾರೆ.
ಇದನ್ನು ಓದಿ: ನ.11ಕ್ಕೆ ಆರ್.ಎಸ್.ಎಸ್ ವಿರುದ್ಧ ʼದಸಂಸ ಪ್ರತಿರೋಧ ಸಮಾವೇಶʼ
ಸುದ್ದಿಗೋಷ್ಠಿಯಲ್ಲಿ ಸ್ವತಃ ಈ ವಿಷಯವನ್ನು ಅವರೇ ತಿಳಿಸಿದ್ದು, ಕಬ್ಬು ಬೆಳೆಗಾರರ ವಿಚಾರದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತುರ್ತಾಗಿ ಭೇಟಿಗೆ ಅವಕಾಶ ನೀಡಬೇಕೆಂದು ಪತ್ರ ಬರೆಯಲು ಹಾಗೂ ಪ್ರಧಾನ ಮಂತ್ರಿಗಳ ಕಛೇರಿಯನ್ನು ಸಂಪರ್ಕಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೂಡಲೇ ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಮುಖ್ಯವಾಗಿ ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ.ಆರ್.ಪಿ. ದರ ಪರಿಷ್ಕರಿಸುವುದು, ಸಕ್ಕರೆ ರಫ್ತು, ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಒತ್ತಾಯಿಸುವಂತೆ ಚರ್ಚಿಸಲಾಯಿತು ಎಂದರು
ಕೇಂದ್ರ ಸರ್ಕಾರವು ರಾಜ್ಯದ ವಿಚಾರದಲ್ಲಿ ನಡೆಸುತ್ತಿರುವ ಮಲತಾಯಿ ಧೋರಣೆಯು ರೈತರ ಅನ್ನದ ತಟ್ಟೆಯವರೆಗೂ, ರೈತರ ಭೂಮಿಯವರೆಗೂ ಬಂದಿದೆ. ಈ ವಿಚಾರದಲ್ಲಿ ನಾವು ಅಧಿಕಾರಕ್ಕೆ ಬಂದಾಗಿನಿಂದ ಧ್ವನಿ ಎತ್ತುತ್ತಿದ್ದೇವೆ ಎಂದು ತಿಳಿಸಿದರು.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…