ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಿಕರು ತಾವು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಆಗುತ್ತಿರುವ ತೊಂದರೆಗಳನ್ನು ತೋಡಿಕೊಂಡಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರೆದಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಲಹೆ ನೀಡುವ ಬದಲು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನೇ ಹೇಳಿದ್ದು, ಮುಖ್ಯಮಂತ್ರಿಗಳ ತಲೆಬಿಸಿಯನ್ನು ಮತ್ತಷ್ಟು ಹೆಚ್ಚಿಸಿದೆ. ಇದರಿಂದ ಅತ್ತ ಧರಿ ಇತ್ತು ಹುಲಿ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದ:-ಹೆದ್ದಾರಿ ತಡೆದು ಉರುಳು ಸೇವೆ ಮಾಡಿ ರೈತರ ಪ್ರತಿಭಟನೆ : ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್
ರೈತರ ಸಮಸ್ಯೆ ಪರಿಹರಿಸುವುದೋ ಅಥವಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ತೊಂದರೆ ನಿವಾರಿಸುವುದೋ ಎಂಬ ಸಂದಿಗ್ಧ ಪರಿಸ್ಥಿತಿ ಎದುರಿಸುವಂತಾಗಿದೆ. ಕೆಳೆದ ಐದು ವರ್ಷದಿಂದ ಎಂಎಸ್ಪಿ ಹೆಚ್ಚಳ ಮಾಡಿಲ್ಲ, ನಾಲ್ಕು ವರ್ಷದಿಂದ ಎಥೆನಾಲ್ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ. ಇದರಿಂದ ನಮಗೆ ಸಮಸ್ಯೆ ಆಗಿದೆ ಎಂದು ಸಕ್ಕರೆ ಕಾರ್ಖಾನೆಗಳ ಮಾಲೀಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಎಂಎಸ್ಪಿ ಮತ್ತು ಎಥೆನಾಲ್ ದರ ಹೆಚ್ಚಿಸುವಂತೆ ನೀವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…