Suhas Shetty murder case: NIA raids 18 locations across the state.
ಹೊಸದಿಲ್ಲಿ : ಸುಹಾಸ್ ಶೆಟ್ಟಿಯನ್ನು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎನ್ಐಎ, ಕಳೆದ ಮೇ ತಿಂಗಳಲ್ಲಿ ಮಂಗಳೂರು ನಗರದ ಬಜ್ಪೆ ಪ್ರದೇಶದಲ್ಲಿ ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಅವರನ್ನು ಆರೋಪಿ ಅಬ್ದುಲ್ ಸಫ್ವಾನ್ ಮತ್ತು ಇತರರು ಮಾರಕ ಆಯುಧಗಳನ್ನು ಬಳಸಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಹತ್ಯೆಯು ಸಮಾಜದಲ್ಲಿ ಭಯೋತ್ಪಾದನೆಯನ್ನು ಹರಡುವ ಉದ್ದೇಶವನ್ನು ಹೊಂದಿತ್ತು ಎಂದು ವಿವರಿಸಿದೆ.
ಜೂನ್ನಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ಎನ್ಐಎ, ಪ್ರಕರಣದಲ್ಲಿ ಬಂಧಿತರಾದ 12 ವ್ಯಕ್ತಿಗಳು ಮತ್ತು ವಿವಿಧ ಶಂಕಿತರ ನಿವಾಸಗಳನ್ನು ಶೋಧಿಸಿದೆ.
ಮಂಗಳೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ನಡೆಸಿದ ಶೋಧದಲ್ಲಿ 11 ಮೊಬೈಲ್ ಫೋನ್ಗಳು, 13 ಸಿಮ್ ಕಾರ್ಡ್ಗಳು ಮತ್ತು 8 ಮೆಮೊರಿ ಕಾರ್ಡ್ಗಳು ಮತ್ತು ಇತರ ಅಪರಾಧ ದಾಖಲೆಗಳು ಸೇರಿದಂತೆ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
ಹತ್ಯೆಯ ಹಿಂದಿನ ಪಿತೂರಿಯ ಬಗ್ಗೆ ತನಿಖೆ ಮುಂದುವರೆದಿದೆ ಎಂದು ತಿಳಿಸಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…