ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿಯ ಲೋಕಸಭಾ ಕಣದಿಂದ ಹಿಂದೆ ಸರಿದು ಎನ್ಡಿಎ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟರು.
ಇದಾದ ಬಳಿಕ ಅವರಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಬಿಜೆಪಿ ಹೇಳಿತ್ತು. ಅದರಂತೆ ಈಗ ಸುಮಲತಾ ಅವರಿಗೆ ಹೈಕಮಾಂಡ್ ಕೊಟ್ಟ ಮಾತಿನಂತೆ ಸ್ಥಾನಮಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಬಹುತೇಕ ಸುಮಲತಾ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಇದೇ ಜೂನ್.13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸುಮಲತಾ ಅವರಿಗೆ ಮೂರು ಸ್ಥಾನಗಳಲ್ಲಿ ಒಂದು ಅಭ್ಯರ್ಥಿ ಸ್ಥಾನವನ್ನು ನೀಡಲಿದೆ ಎಂದು ವರದಿಯಾಗಿದೆ.
ಒಟ್ಟು 66 ಶಾಸಕರನ್ನು ಹೊಂಡದಿರುವ ಬಿಜೆಪಿ ತನ್ನ ಪಕ್ಷದಿಂದ ಮೂವರನ್ನು ಆಯ್ಕೆ ಮಾಡಲಿದ್ದು, ಈ ಮೂವರ ಪೈಕಿ ಸುಮಲತಾ ಅವರಿಗೆ ಸ್ಥಾನಮಾನ ಸಿಗಲಿದೆ. ಇವರ ಜತೆಗೆ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಪ್ರೊ. ಎಂ. ನಾಗರಾಜ್ ಹೆಸರನ್ನು ಸಹಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕಾರ್ಯದರ್ಶಿ ಜಿ.ವಿ ರಾಜೇಶ್ ಒಟ್ಟು 9 ಜನರ ಹೆಸರನ್ನು ಶಾರ್ಟ್ಲಿಸ್ಟ್ ಮಾಡಿದ್ದು, ಇದರಲ್ಲಿ ನಳೀನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಜೆಸಿ ಮಾಧುಸ್ವಾಮಿ, ಸಿಟಿ ರವಿ, ಮಾಳವಿಕಾ ಅವಿನಾಶ್, ಗೀತಾ ವಿವೇಕಾನಂದ, ಸಿ ಮಂಜುಳ ಹೆಸರನ್ನು ಸೂಚಿಸಲಾಗಿದೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…