ರಾಜ್ಯ

ಪರಿಷತ್‌ ಚುನಾವಣೆ: ಮಂಡ್ಯ ಬಿಟ್ಟುಕೊಟ್ಟ ಸುಮಲತಾಗೆ ಬಂಪರ್‌ ಆಫರ್‌

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿಯ ಲೋಕಸಭಾ ಕಣದಿಂದ ಹಿಂದೆ ಸರಿದು ಎನ್‌ಡಿಎ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟರು.

ಇದಾದ ಬಳಿಕ ಅವರಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಬಿಜೆಪಿ ಹೇಳಿತ್ತು. ಅದರಂತೆ ಈಗ ಸುಮಲತಾ ಅವರಿಗೆ ಹೈಕಮಾಂಡ್‌ ಕೊಟ್ಟ ಮಾತಿನಂತೆ ಸ್ಥಾನಮಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಬಹುತೇಕ ಸುಮಲತಾ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದೇ ಜೂನ್‌.13 ರಂದು ನಡೆಯುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಸುಮಲತಾ ಅವರಿಗೆ ಮೂರು ಸ್ಥಾನಗಳಲ್ಲಿ ಒಂದು ಅಭ್ಯರ್ಥಿ ಸ್ಥಾನವನ್ನು ನೀಡಲಿದೆ ಎಂದು ವರದಿಯಾಗಿದೆ.

ಒಟ್ಟು 66 ಶಾಸಕರನ್ನು ಹೊಂಡದಿರುವ ಬಿಜೆಪಿ ತನ್ನ ಪಕ್ಷದಿಂದ ಮೂವರನ್ನು ಆಯ್ಕೆ ಮಾಡಲಿದ್ದು, ಈ ಮೂವರ ಪೈಕಿ ಸುಮಲತಾ ಅವರಿಗೆ ಸ್ಥಾನಮಾನ ಸಿಗಲಿದೆ. ಇವರ ಜತೆಗೆ ಪರಿಷತ್‌ ಮುಖ್ಯ ಸಚೇತಕ ಎನ್‌. ರವಿಕುಮಾರ್‌, ಪ್ರೊ. ಎಂ. ನಾಗರಾಜ್‌ ಹೆಸರನ್ನು ಸಹಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕಾರ್ಯದರ್ಶಿ ಜಿ.ವಿ ರಾಜೇಶ್‌ ಒಟ್ಟು 9 ಜನರ ಹೆಸರನ್ನು ಶಾರ್ಟ್‌ಲಿಸ್ಟ್‌ ಮಾಡಿದ್ದು, ಇದರಲ್ಲಿ ನಳೀನ್‌ ಕುಮಾರ್‌ ಕಟೀಲ್‌, ಪ್ರತಾಪ್‌ ಸಿಂಹ, ಜೆಸಿ ಮಾಧುಸ್ವಾಮಿ, ಸಿಟಿ ರವಿ, ಮಾಳವಿಕಾ ಅವಿನಾಶ್‌, ಗೀತಾ ವಿವೇಕಾನಂದ, ಸಿ ಮಂಜುಳ ಹೆಸರನ್ನು ಸೂಚಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

20 mins ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

50 mins ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

1 hour ago

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

2 hours ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

3 hours ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

3 hours ago