ರಾಜ್ಯ

ಪರಿಷತ್‌ ಚುನಾವಣೆ: ಮಂಡ್ಯ ಬಿಟ್ಟುಕೊಟ್ಟ ಸುಮಲತಾಗೆ ಬಂಪರ್‌ ಆಫರ್‌

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿಯ ಲೋಕಸಭಾ ಕಣದಿಂದ ಹಿಂದೆ ಸರಿದು ಎನ್‌ಡಿಎ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟರು.

ಇದಾದ ಬಳಿಕ ಅವರಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಮಾನ ನೀಡುವುದಾಗಿ ಬಿಜೆಪಿ ಹೇಳಿತ್ತು. ಅದರಂತೆ ಈಗ ಸುಮಲತಾ ಅವರಿಗೆ ಹೈಕಮಾಂಡ್‌ ಕೊಟ್ಟ ಮಾತಿನಂತೆ ಸ್ಥಾನಮಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಬಹುತೇಕ ಸುಮಲತಾ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದೇ ಜೂನ್‌.13 ರಂದು ನಡೆಯುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಯಿಂದ ಸುಮಲತಾ ಅವರಿಗೆ ಮೂರು ಸ್ಥಾನಗಳಲ್ಲಿ ಒಂದು ಅಭ್ಯರ್ಥಿ ಸ್ಥಾನವನ್ನು ನೀಡಲಿದೆ ಎಂದು ವರದಿಯಾಗಿದೆ.

ಒಟ್ಟು 66 ಶಾಸಕರನ್ನು ಹೊಂಡದಿರುವ ಬಿಜೆಪಿ ತನ್ನ ಪಕ್ಷದಿಂದ ಮೂವರನ್ನು ಆಯ್ಕೆ ಮಾಡಲಿದ್ದು, ಈ ಮೂವರ ಪೈಕಿ ಸುಮಲತಾ ಅವರಿಗೆ ಸ್ಥಾನಮಾನ ಸಿಗಲಿದೆ. ಇವರ ಜತೆಗೆ ಪರಿಷತ್‌ ಮುಖ್ಯ ಸಚೇತಕ ಎನ್‌. ರವಿಕುಮಾರ್‌, ಪ್ರೊ. ಎಂ. ನಾಗರಾಜ್‌ ಹೆಸರನ್ನು ಸಹಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಕಾರ್ಯದರ್ಶಿ ಜಿ.ವಿ ರಾಜೇಶ್‌ ಒಟ್ಟು 9 ಜನರ ಹೆಸರನ್ನು ಶಾರ್ಟ್‌ಲಿಸ್ಟ್‌ ಮಾಡಿದ್ದು, ಇದರಲ್ಲಿ ನಳೀನ್‌ ಕುಮಾರ್‌ ಕಟೀಲ್‌, ಪ್ರತಾಪ್‌ ಸಿಂಹ, ಜೆಸಿ ಮಾಧುಸ್ವಾಮಿ, ಸಿಟಿ ರವಿ, ಮಾಳವಿಕಾ ಅವಿನಾಶ್‌, ಗೀತಾ ವಿವೇಕಾನಂದ, ಸಿ ಮಂಜುಳ ಹೆಸರನ್ನು ಸೂಚಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

59 mins ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

1 hour ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

14 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

15 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

16 hours ago