ಹಾಸನ: ಹಾಸನದಲ್ಲಿ ಕೆಲವು ಬಿಜೆಪಿಗರು ನಮಗೆ ಬೆಂಬಲ ಘೋಷಿಸದೇ ಇರುವುದು ನಿಜ. ಹಾಗೆಯೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಎಚ್ಡಿ ಕುಮಾರಸ್ವಾಮಿಗೆ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ. ಆ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ದೊಡ್ಡಗೌಡ್ರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿಗೆ ಬಿಜೆಪಿಯ ಸುಮಲತಾ ಅಂಬರೀಶ್ ಅವರು ಸಹಾಯ ಮಾಡಿಲ್ಲ. ಹಾಗಂತ ಕುಮಾರಸ್ವಾಮಿಗೆ ಬಹಳ ಅಪಾಯವಾಗಲಿದೆ ಎಂದು ಅರ್ಥವಲ್ಲ. ಆದರೂ ಸಹಾ ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಪತ್ತಿನ ಸರ್ವೆ ಹಾಗೂ ಹಂಚಿಕೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಕುರಿತು, ಈ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕೆಂದು ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಭಾಗದ ಎಲ್ಲಾ ಕಡೆಗಳಲ್ಲಿಯೂ ನಾನು ಪ್ರಚಾರ ಮಾಡಿದ್ದೇನೆ. ಕಾವೇರಿ ಹೋರಾಟ ನಮ್ಮ ಜೀವನ್ಮರಣದ ಹೋರಾಟವಾಗಿದೆ. ಇದಕ್ಕಾಗಿ ನಾವು ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು, ಮೋದಿ ಅವರನ್ನು ಪ್ರಧಾಯನ್ನಾಗಿ ಮಾಡಬೇಕು. ಮತ್ತು ಈ ಬಾರಿ ಬಿಜೆಪಿ ತಮಿಳುನಾಡಿನಲ್ಲಿ ಖಾತೆ ತೆರೆಯಲಿದೆ ಎಂದು ಎಚ್ಡಿಕೆ ತಿಳಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…