ರಾಜ್ಯ

ನಾಳೆ(ಏ.೫) ಬಿಜೆಪಿಗೆ ಸಂಸದೆ ಸುಮಲತಾ ಸೇರ್ಪಡೆ: ಇವರಿಗಾಗಿ ಬಿಜೆಪಿಗೆ ಸೇರುತ್ತಿದ್ದೇನೆ ಎಂದ ಸಂಸದೆ!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ನಾಳೆ (ಏ.೫) ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಸುಮಲತಾ ಅಂಬರೀಶ್‌ ಅವರು ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ, ಮೈತ್ರಿ ಮೊರೆಹೋದ ಎನ್‌ಡಿಎ, ಬಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಟಿಕೆಟ್‌ ಘೊಷಣೆ ಮಾಡಿತು. ಇದರ ಬೆನ್ನಲ್ಲೇ ರಾಜ್ಯ ಹಾಗೂ ಹೈಕಮಾಂಡ್‌ನ ಬಿಜೆಪಿ ನಾಯಕರು ಸುಮಲತಾ ಪರವಾಗಿದ್ದು, ತಮ್ಮ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚನೆ ನೀಡಿದ್ದರು.

ಈ ಎಲ್ಲಾ ಷರತ್ತುಗಳನ್ನು ಒಪ್ಪಿರುವ ಸಂಸದೆ ಸುಮಲತಾ ಅವರು ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದರು. ಅವರು ಬಿಜೆಪಿಗೆ ಸೇರುವುದು ಬಹುತೇಕ ಖಚಿತ ಎಂಬ ಮಾಹಿತಿ ಹೊರ ಬರುತ್ತಿದ್ದಂತೆ ನಾಳೆ (ಏ.೫) ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಸುಮಲತಾ ಪ್ರಕಟಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೋದಿ ಅವರನ್ನು ಪ್ರಧಾನಿಯನ್ನಾಗಿ ನೋಡುವ ಆಶಯದೊಂದಿಗೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಸುಮಲತಾ ಟ್ವೀಟ್‌ನಲ್ಲೇನಿದೆ?

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ.

ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ  ಚಾಮರಾಜನಗರ: ಬಿಸಿಲ ತಾಪ…

2 mins ago

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

8 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

14 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago