ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ.
ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದಾರೆ. ದರ್ಶನ್ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.
ದರ್ಶನ್ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…