ರಾಜ್ಯ

ದರ್ಶನ್‌ ಬಂಧನ ವಿಚಾರ: ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಮಲತಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್‌ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್‌ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್‌ ದರ್ಶನ್‌ ಬಗ್ಗೆ ಮಾತನಾಡಿದ್ದಾರೆ.

ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್‌ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಾತನಾಡಿದ್ದಾರೆ. ದರ್ಶನ್‌ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್‌ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್‌ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.

ದರ್ಶನ್‌ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್‌ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್‌ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್‌ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

6 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

10 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

10 hours ago