ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ.
ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದಾರೆ. ದರ್ಶನ್ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.
ದರ್ಶನ್ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…