ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್ ದರ್ಶನ್ ಬಗ್ಗೆ ಮಾತನಾಡಿದ್ದಾರೆ.
ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾತನಾಡಿದ್ದಾರೆ. ದರ್ಶನ್ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.
ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.
ದರ್ಶನ್ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…