ರಾಜ್ಯ

ದರ್ಶನ್‌ ಬಂಧನ ವಿಚಾರ: ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಮಲತಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್‌ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್‌ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್‌ ದರ್ಶನ್‌ ಬಗ್ಗೆ ಮಾತನಾಡಿದ್ದಾರೆ.

ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್‌ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಾತನಾಡಿದ್ದಾರೆ. ದರ್ಶನ್‌ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್‌ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್‌ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.

ದರ್ಶನ್‌ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್‌ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್‌ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್‌ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

13 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

13 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago