ರಾಜ್ಯ

ದರ್ಶನ್‌ ಬಂಧನ ವಿಚಾರ: ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಮಲತಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧನವಾಗಿ 20 ದಿನಗಳೇ ಕಳೆದಿವೆ. ಹೀಗಿದ್ದರೂ ಕನ್ನಡ ಚಿತ್ರರಂಗದ ಹಲವರು ಈವರೆಗೆ ದರ್ಶನ್‌ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಇಪ್ಪತ್ತು ದಿನಗಳ ಬಳಿಕೆ ಇದೇ ಮೊದಲ ಬಾರಿಗೆ ದರ್ಶನ್‌ ತಾಯಿ ಎಂದೇ ಪ್ರಖ್ಯಾತಿಯಾಗಿರುವ ಸುಮಲತಾ ಅಂಬರೀಶ್‌ ದರ್ಶನ್‌ ಬಗ್ಗೆ ಮಾತನಾಡಿದ್ದಾರೆ.

ಇಂದು (ಜುಲೈ. 4) ಮೊದಲ ಬಾರಿಗೆ ತಮ್ಮ ಮೊದಲ ಪುತ್ರ ದರ್ಶನ್‌ ಬಗ್ಗೆ ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಾತನಾಡಿದ್ದಾರೆ. ದರ್ಶನ್‌ ಒಬ್ಬ ಜನಸ್ನೇಹಿ ವ್ಯಕ್ತಿಯಾಗಿದ್ದು, ಈ ಕೊಲೆ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಮಾತನಾಡಿರುವ ಅವರು, ಅವನು ನನಗೆ ಯಾವತ್ತಿಗು ಮೊದಲನೇ ಮಗನೇ. ಪೊಲೀಸರ ಬಳಿಯಿರುವ ಮಾಹಿತಿ ಅಥವಾ ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಬಗ್ಗೆ ನನ್ನ ಬಳಿ ಮಾಹಿಯಿಲ್ಲ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ಈ ವಿಚಾರ ಕೋರ್ಟ್‌ನಲ್ಲಿರುವುದರಿಂದ ಈ ಬಗ್ಗೆ ಮಾತನಾಡಲು ನಮಗೆ ಯಾವುದೇ ರೈಟ್ಸ್‌ ಇಲ್ಲ. ಕಾನೂನಿಗೆ ನಾನು ಗೌರವ ನೀಡುತ್ತೇನೆ. ಅದು ಅದರ ಕೆಲಸವನ್ನು ಮಾಡುತ್ತದೆ ಅದಕ್ಕಿಂತ ಇಲ್ಲಿ ಯಾರೂ ದೊಡ್ಡವರಿಲ್ಲ.

ದರ್ಶನ್‌ ಒಬ್ಬ ಜನಸ್ನೇಹಿ ನಾಯಕ. ನನ್ನ ಚುನಾವಣೆಯಲ್ಲಿಯೇ ದರ್ಶನ್‌ ವ್ಯಕ್ತಿತ್ವವನ್ನು ನೋಡಿದ್ದೀರಿ ಆತ ಎಂದಿಗೂ ಯಾರಿಗೂ ಕೆಡುಕನ್ನು ಬಯಸದ ವ್ಯಕ್ತಿಯಾಗಿದ್ದು, ದರ್ಶನ್‌ ಅವರನ್ನು ನಾವು ಹಾಗೆಯೇ ನೋಡಿದ್ದೇವೆ. ಇನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಾಹಿತಿಲ್ಲ. ನಾನೊಬ್ಬ ತಾಯಿಯಾಗಿ ದರ್ಶನ್‌ ಕೊಲೆ ಮಾಡಿಲ್ಲ ಎಂದಷ್ಟೆ ಹೇಳಬಲ್ಲೆ. ನನಗೆ ಅನಿಸಿದ್ದನ್ನು ಹಂಚಿಕೊಂಡಿದ್ದೇನೆ ಎಂದು ಸುಮಲತಾ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago