ರಾಜ್ಯ

ಜೈಲಿನಲ್ಲಿ ದರ್ಶನ್‌ರನ್ನೇ ಹೈಲೆಟ್‌ ಮಾಡುತ್ತಿದ್ದಾರೆ: ಮಾಜಿ ಸಂಸದೆ ಸುಮಲತಾ ಅಂಬರೀಷ್‌

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಟ ದರ್ಶನ್‌ ಸದ್ಯ ಆರೋಪಿ ಸ್ಥಾನದಲ್ಲಿದ್ದಾರೆ. ಜೈಲಿನಲ್ಲಿರುವ ಉಳಿದವರನ್ನು ಬಿಟ್ಟು ದರ್ಶನ್‌ರನ್ನೇ ಹೈಲೆಟ್‌ ಮಾಡಲಾಗುತ್ತಿದೆ ಎಂದರು.

ನಾವೆಲ್ಲಾ ಈ ವಿಚಾರದಲ್ಲಿ ವಿವೇಚನೆ ಇಟ್ಟುಕೊಂಡು ಮಾತನಾಡೋಣ. ಜೈಲಿನಲ್ಲಿ ಇರುವುದೇ ಕ್ರಿಮಿನಲ್ಸ್‌ ಅಲ್ವಾ ಎಂದು ಪ್ರಶ್ನೆ ಮಾಡಿದರು. ಅಲ್ಲಿ ಓಡಾಟ ನಡೆಸೋಕೆ ಯಾರು ಸಿಗುತ್ತಾರೆ. ಯಾವುದಾದರೂ ಒಂದು ತಪ್ಪು ಮಾಡಿದವರೇ ಅಲ್ವಾ ಜೈಲಿಗೆ ಹೋಗೋದು ಎಂದು ದರ್ಶನ್‌ರನ್ನು ಸಮರ್ಥನೆ ಮಾಡಿಕೊಂಡು ಮಾತನಾಡಿದರು.

ದರ್ಶನ್‌ ರಾಜಾತಿಥ್ಯ ಬಗ್ಗೆ ಜೈಲಿನಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು. ಇದರಲ್ಲಿ ಭಾಗಿಯಾದ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಚಿವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ದರ್ಶನ್‌ ಈಗ ಆರೋಪಿ ಸ್ಥಾನದಲ್ಲಿದ್ದಾರೆ. ಉಳಿದವರನ್ನು ಬಿಟ್ಟು ದರ್ಶನ್‌ರನ್ನೇ ಹೈಲೆಟ್‌ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

11 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

4 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

4 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago