ಬೆಂಗಳೂರು: ದರ್ಶನ್ ಯಾವತ್ತಿದ್ದರೂ ನನ್ನ ಮಗನೇ, ತಾಯಿ ಮತ್ತು ಮಗನ ಸಂಬಂಧದಲ್ಲಿ ವಿವಾದ ಸೃಷ್ಠಿಸಬೇಡಿ. ನಾನು ಹಂಚಿಕೆ ಮಾಡಿರುವ ಪೋಸ್ಟ್ಗೂ ದರ್ಶನ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ವಿವಾದಕ್ಕೆ ತೆರೆ ಎಳೆದಿದ್ದಾರೆ.
ನಟ ದರ್ಶನ್ ಅವರು ಟ್ವಿಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ತಮ್ಮ ಮಗ ವಿನೀಶ್ ಹಾಗೂ ಸುಮಲತಾ ಅಂಬರೀಶ್ ಅವರನ್ನು ಅನ್ ಫಾಲೋ ಮಾಡಿದ ವಿಚಾರ ಹಾಟ್ ಟಾಪಿಕ್ ಆಗಿತ್ತು. ಈ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಸುಮಲತಾ ಅವರ ನಡುವಿನ ಸಂಬಂಧ ಸರಿಯಿಲ್ಲ ಎಂಬ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದು ಮಾಡಿತ್ತು.
ಈ ಕುರಿತು ಸುಮಲತಾ ಅವರು ಪ್ರತಿಕ್ರಿಯೆ ನೀಡಿ, ಇದೆಲ್ಲಾ ಅನಗತ್ಯವಾದ ವಿವಾದ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ನನಗೆ ಅಷ್ಟು ಸಮಯವೂ ಇಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು ಎಂದು ಹೇಳಿದ್ದಾರೆ.
ದರ್ಶನ್ ಅವರು ನಿಜವಾಗಿಯೂ ಯಾರನ್ನೂ ಇನ್ಸ್ಟಾಗ್ರಾಂ ಮತ್ತು ಟ್ವಿಟರ್ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಆದರೆ ಈ ಬಗ್ಗೆ ನನ್ನನ್ನು ಮಾತ್ರ ಯಾಕೆ ಪಾಯಿಂಟ್ ಔಟ್ ಮಾಡುತ್ತಿದ್ದೀರಿ? ಅವರು ಫಾಲೋ ಮಾಡೋದು ಅಥವಾ ಅನ್ ಫಾಲೋ ಮಾಡೋದು ಅವರ ವೈಯಕ್ತಿಕ ಆಯ್ಕೆ. ಆದರೆ ಈ ವಿಚಾರ ನನಗೆ ಈಗ ಗಮನಕ್ಕೆ ಬಂದಿದೆ. ನಾನು ಜನರಲ್ ಆಗಿ ಪೋಸ್ಟ್ ಮಾಡಿದ್ದೇನೆ. ನಾನು ಬರೆದ ಸಾಲುಗಳಲ್ಲ, ಎಲ್ಲೋ ನೋಡಿದ ಪೋಸ್ಟ್ ಹಾಕಿದ್ದೇನಷ್ಟೇ. ಯಾರನ್ನು ಟಾರ್ಗೆಟ್ ಮಾಡಿ, ಯಾರನ್ನು ಉದ್ದೇಶಿಸಿ ಪೋಸ್ಟ್ ಹಾಕಿಲ್ಲ ಎಂದರು.
ಇನ್ನೂ ದರ್ಶನ್ ಬಗ್ಗೆ ನಾನು ನೆಗೆಟಿವ್ ಮಾತನಾಡುತ್ತೇನಾ? ದರ್ಶನ್ ಯಾವಾತ್ತಿದ್ದರೂ ನನ್ನ ಮಗ ಎಂದು ಮೊದಲಿನಿಂದಲೂ ಹೇಳುತ್ತಲೇ ಇದ್ದೇನೆ. ಅದು ಅವತ್ತಿಗೂ ಅಷ್ಟೇ, ಇವತ್ತಿಗೂ ಅಷ್ಟೇ. ನನ್ನ ಪ್ರೀತಿ ಮತ್ತು ಅಭಿಮಾನ ಯಾವತ್ತಿಗೂ ಒಂದೇ ತರಹ ಇರುತ್ತದೆ. ಆ ಪೋಸ್ಟ್ಗೂ, ದರ್ಶನ್ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…