ರಾಜ್ಯ

ದರ್ಶನ್‌ ಯಾವತ್ತಿದ್ದರೂ ನನ್ನ ಮಗ| ತಾಯಿ ಮಗನ ಸಂಬಂಧದಲ್ಲಿ ವಿವಾದ ಸೃಷ್ಟಿಸಬೇಡಿ: ಸುಮಲತಾ

ಬೆಂಗಳೂರು: ದರ್ಶನ್‌ ಯಾವತ್ತಿದ್ದರೂ ನನ್ನ ಮಗನೇ, ತಾಯಿ ಮತ್ತು ಮಗನ ಸಂಬಂಧದಲ್ಲಿ ವಿವಾದ ಸೃಷ್ಠಿಸಬೇಡಿ. ನಾನು ಹಂಚಿಕೆ ಮಾಡಿರುವ ಪೋಸ್ಟ್‌ಗೂ ದರ್ಶನ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿವಾದಕ್ಕೆ ತೆರೆ ಎಳೆದಿದ್ದಾರೆ.

ನಟ ದರ್ಶನ್‌ ಅವರು ಟ್ವಿಟರ್‌ ಹಾಗೂ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಮಗ ವಿನೀಶ್‌ ಹಾಗೂ ಸುಮಲತಾ ಅಂಬರೀಶ್‌ ಅವರನ್ನು ಅನ್‌ ಫಾಲೋ ಮಾಡಿದ ವಿಚಾರ ಹಾಟ್‌ ಟಾಪಿಕ್‌ ಆಗಿತ್ತು. ಈ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ ಹಿನ್ನೆಲೆಯಲ್ಲಿ ದರ್ಶನ್‌ ಮತ್ತು ಸುಮಲತಾ ಅವರ ನಡುವಿನ ಸಂಬಂಧ ಸರಿಯಿಲ್ಲ ಎಂಬ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದು ಮಾಡಿತ್ತು.

ಈ ಕುರಿತು ಸುಮಲತಾ ಅವರು ಪ್ರತಿಕ್ರಿಯೆ ನೀಡಿ, ಇದೆಲ್ಲಾ ಅನಗತ್ಯವಾದ ವಿವಾದ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ನನಗೆ ಅಷ್ಟು ಸಮಯವೂ ಇಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು ಎಂದು ಹೇಳಿದ್ದಾರೆ.

ದರ್ಶನ್‌ ಅವರು ನಿಜವಾಗಿಯೂ ಯಾರನ್ನೂ ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಆದರೆ ಈ ಬಗ್ಗೆ ನನ್ನನ್ನು ಮಾತ್ರ ಯಾಕೆ ಪಾಯಿಂಟ್‌ ಔಟ್‌ ಮಾಡುತ್ತಿದ್ದೀರಿ? ಅವರು ಫಾಲೋ ಮಾಡೋದು ಅಥವಾ ಅನ್‌ ಫಾಲೋ ಮಾಡೋದು ಅವರ ವೈಯಕ್ತಿಕ ಆಯ್ಕೆ. ಆದರೆ ಈ ವಿಚಾರ ನನಗೆ ಈಗ ಗಮನಕ್ಕೆ ಬಂದಿದೆ. ನಾನು ಜನರಲ್ ಆಗಿ ಪೋಸ್ಟ್ ಮಾಡಿದ್ದೇನೆ. ನಾನು ಬರೆದ ಸಾಲುಗಳಲ್ಲ, ಎಲ್ಲೋ ನೋಡಿದ ಪೋಸ್ಟ್ ಹಾಕಿದ್ದೇನಷ್ಟೇ. ಯಾರನ್ನು ಟಾರ್ಗೆಟ್ ಮಾಡಿ, ಯಾರನ್ನು ಉದ್ದೇಶಿಸಿ ಪೋಸ್ಟ್ ಹಾಕಿಲ್ಲ ಎಂದರು.

ಇನ್ನೂ ದರ್ಶನ್ ಬಗ್ಗೆ ನಾನು ನೆಗೆಟಿವ್ ಮಾತನಾಡುತ್ತೇನಾ? ದರ್ಶನ್ ಯಾವಾತ್ತಿದ್ದರೂ ನನ್ನ ಮಗ ಎಂದು ಮೊದಲಿನಿಂದಲೂ ಹೇಳುತ್ತಲೇ ಇದ್ದೇನೆ. ಅದು ಅವತ್ತಿಗೂ ಅಷ್ಟೇ, ಇವತ್ತಿಗೂ ಅಷ್ಟೇ. ನನ್ನ ಪ್ರೀತಿ ಮತ್ತು ಅಭಿಮಾನ ಯಾವತ್ತಿಗೂ ಒಂದೇ ತರಹ ಇರುತ್ತದೆ. ಆ ಪೋಸ್ಟ್‌ಗೂ, ದರ್ಶನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago