ರಾಜ್ಯ

ದರ್ಶನ್‌ ಯಾವತ್ತಿದ್ದರೂ ನನ್ನ ಮಗ| ತಾಯಿ ಮಗನ ಸಂಬಂಧದಲ್ಲಿ ವಿವಾದ ಸೃಷ್ಟಿಸಬೇಡಿ: ಸುಮಲತಾ

ಬೆಂಗಳೂರು: ದರ್ಶನ್‌ ಯಾವತ್ತಿದ್ದರೂ ನನ್ನ ಮಗನೇ, ತಾಯಿ ಮತ್ತು ಮಗನ ಸಂಬಂಧದಲ್ಲಿ ವಿವಾದ ಸೃಷ್ಠಿಸಬೇಡಿ. ನಾನು ಹಂಚಿಕೆ ಮಾಡಿರುವ ಪೋಸ್ಟ್‌ಗೂ ದರ್ಶನ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ವಿವಾದಕ್ಕೆ ತೆರೆ ಎಳೆದಿದ್ದಾರೆ.

ನಟ ದರ್ಶನ್‌ ಅವರು ಟ್ವಿಟರ್‌ ಹಾಗೂ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಮಗ ವಿನೀಶ್‌ ಹಾಗೂ ಸುಮಲತಾ ಅಂಬರೀಶ್‌ ಅವರನ್ನು ಅನ್‌ ಫಾಲೋ ಮಾಡಿದ ವಿಚಾರ ಹಾಟ್‌ ಟಾಪಿಕ್‌ ಆಗಿತ್ತು. ಈ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ ಹಿನ್ನೆಲೆಯಲ್ಲಿ ದರ್ಶನ್‌ ಮತ್ತು ಸುಮಲತಾ ಅವರ ನಡುವಿನ ಸಂಬಂಧ ಸರಿಯಿಲ್ಲ ಎಂಬ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದು ಮಾಡಿತ್ತು.

ಈ ಕುರಿತು ಸುಮಲತಾ ಅವರು ಪ್ರತಿಕ್ರಿಯೆ ನೀಡಿ, ಇದೆಲ್ಲಾ ಅನಗತ್ಯವಾದ ವಿವಾದ. ಯಾರು ನನ್ನನ್ನು ಫಾಲೋ ಮಾಡುತ್ತಾರೆ ಅಥವಾ ಅನ್‌ಫಾಲೋ ಮಾಡುತ್ತಾರೆ ಎಂಬುದನ್ನು ಗಮನಿಸುವ ಅಭ್ಯಾಸ ಹೊಂದಿಲ್ಲ. ನನಗೆ ಅಷ್ಟು ಸಮಯವೂ ಇಲ್ಲ. ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ಸುದ್ದಿಗಳು ಬಂದ ಬಳಿಕವೇ ನನಗೂ ಈ ಬೆಳವಣಿಗೆ ತಿಳಿಯಿತು ಎಂದು ಹೇಳಿದ್ದಾರೆ.

ದರ್ಶನ್‌ ಅವರು ನಿಜವಾಗಿಯೂ ಯಾರನ್ನೂ ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ನಲ್ಲಿ ಯಾರನ್ನೂ ಫಾಲೋ ಮಾಡುತ್ತಿಲ್ಲ. ಆದರೆ ಈ ಬಗ್ಗೆ ನನ್ನನ್ನು ಮಾತ್ರ ಯಾಕೆ ಪಾಯಿಂಟ್‌ ಔಟ್‌ ಮಾಡುತ್ತಿದ್ದೀರಿ? ಅವರು ಫಾಲೋ ಮಾಡೋದು ಅಥವಾ ಅನ್‌ ಫಾಲೋ ಮಾಡೋದು ಅವರ ವೈಯಕ್ತಿಕ ಆಯ್ಕೆ. ಆದರೆ ಈ ವಿಚಾರ ನನಗೆ ಈಗ ಗಮನಕ್ಕೆ ಬಂದಿದೆ. ನಾನು ಜನರಲ್ ಆಗಿ ಪೋಸ್ಟ್ ಮಾಡಿದ್ದೇನೆ. ನಾನು ಬರೆದ ಸಾಲುಗಳಲ್ಲ, ಎಲ್ಲೋ ನೋಡಿದ ಪೋಸ್ಟ್ ಹಾಕಿದ್ದೇನಷ್ಟೇ. ಯಾರನ್ನು ಟಾರ್ಗೆಟ್ ಮಾಡಿ, ಯಾರನ್ನು ಉದ್ದೇಶಿಸಿ ಪೋಸ್ಟ್ ಹಾಕಿಲ್ಲ ಎಂದರು.

ಇನ್ನೂ ದರ್ಶನ್ ಬಗ್ಗೆ ನಾನು ನೆಗೆಟಿವ್ ಮಾತನಾಡುತ್ತೇನಾ? ದರ್ಶನ್ ಯಾವಾತ್ತಿದ್ದರೂ ನನ್ನ ಮಗ ಎಂದು ಮೊದಲಿನಿಂದಲೂ ಹೇಳುತ್ತಲೇ ಇದ್ದೇನೆ. ಅದು ಅವತ್ತಿಗೂ ಅಷ್ಟೇ, ಇವತ್ತಿಗೂ ಅಷ್ಟೇ. ನನ್ನ ಪ್ರೀತಿ ಮತ್ತು ಅಭಿಮಾನ ಯಾವತ್ತಿಗೂ ಒಂದೇ ತರಹ ಇರುತ್ತದೆ. ಆ ಪೋಸ್ಟ್‌ಗೂ, ದರ್ಶನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago