ಮಂಡ್ಯ: ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ ವ್ಯಕ್ತಪಡಿಸಿದ್ದಾರೆ.
ತಮ್ಮ ಫೇಸ್ಬುಕ್ ಕಾತೆ ಮೂಲಕ ಖಂಡನೆ ವ್ಯಕ್ತಪಡಿಸಿರುವ ಸುಮಲತ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ.
ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದಿದ್ದಾರೆ.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…