ಮಂಡ್ಯ: ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ ವ್ಯಕ್ತಪಡಿಸಿದ್ದಾರೆ.
ತಮ್ಮ ಫೇಸ್ಬುಕ್ ಕಾತೆ ಮೂಲಕ ಖಂಡನೆ ವ್ಯಕ್ತಪಡಿಸಿರುವ ಸುಮಲತ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ.
ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…