ರಾಜ್ಯ

ಭ್ರೂಣ ಹತ್ಯೆ ಕೃತ್ಯದ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಸುಮಲತಾ ಅಂಬರೀಷ್‌

ಮಂಡ್ಯ:  ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ ವ್ಯಕ್ತಪಡಿಸಿದ್ದಾರೆ.

ತಮ್ಮ ಫೇಸ್‌ಬುಕ್‌ ಕಾತೆ ಮೂಲಕ ಖಂಡನೆ ವ್ಯಕ್ತಪಡಿಸಿರುವ ಸುಮಲತ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ.

ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

14 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

14 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

14 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago