ಮಂಡ್ಯ: ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ ವ್ಯಕ್ತಪಡಿಸಿದ್ದಾರೆ.
ತಮ್ಮ ಫೇಸ್ಬುಕ್ ಕಾತೆ ಮೂಲಕ ಖಂಡನೆ ವ್ಯಕ್ತಪಡಿಸಿರುವ ಸುಮಲತ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ.
ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…