Mysore
18
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಕಿಡ್ಯ್ನಾಪ್‌ ಕೇಸ್‌ನಲ್ಲಿ ಹೆಚ್‌.ಡಿ ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್‌ ಜಾರಿ

ಬೆಂಗಳೂರು: ಮೈಸೂರು ಜಿಲ್ಲೆಯ ಕೆಆರ್‌ ನಗರ ತಾಲೂಕಿನ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಿಲುಕಿರುವ ಹೆಚ್‌ಡಿ ರೇವಣ್ಣ ಪತ್ನಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿ ಸಮನ್ಸ್‌ ಜಾರಿ ಮಾಡಲಾಗಿದೆ.

ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ನಿಂದ ಸಮನ್ಸ್‌ ಜಾರಿ ಮಾಡಲಾಗಿದ್ದು, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.

ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್‌ ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್‍ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್‌ ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿ, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

Tags:
error: Content is protected !!