ಬೆಂಗಳೂರು: ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮಹಿಳೆಯ ಅಪಹರಣ ಪ್ರಕರಣದಲ್ಲಿ ಸಿಲುಕಿರುವ ಹೆಚ್ಡಿ ರೇವಣ್ಣ ಪತ್ನಿ ಭವಾನಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿ 9 ಆರೋಪಿಗಳಿ ಸಮನ್ಸ್ ಜಾರಿ ಮಾಡಲಾಗಿದೆ.
ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಆಗಸ್ಟ್ 28 ರಂದು ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.
ಸತೀಶ್ ಬಾಬು, ಮನುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿ ಮತ್ತು ಅಜಿತ್ ಕುಮಾರ್ ಗೆ ಐಪಿಸಿ ಸೆಕ್ಷನ್ 364 A ಕೈಬಿಟ್ಟು ಉಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಆರೋಪಿ ಭವಾನಿ ರೇವಣ್ಣಗೆ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಎಸ್ಐಟಿ ಅಧಿಕಾರಿಗಳು, ಸುಪ್ರೀಂಕೋರ್ಟ್ ಗೆ ಇತ್ತೀಚೆಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ ಭವಾನಿ ರೇವಣ್ಣಾಗೆ ನೊಟೀಸ್ ಜಾರಿ ಮಾಡಿ, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…