ರಾಜ್ಯ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ: ಸುನಿಲ್‌ ಕುಮಾರ್‌

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಮನವಿ ಮಾಡಿದ್ದಾರೆ.

ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್‌ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. ಈ ನಡುವೆಯೇ ಸುನೀಲ್‌ ಕುಮಾರ್‌ ಅವರು ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿರುವುದು ಕೂತುಹಲ ಮೂಡಿಸಿದೆ. ಸುನೀಲ್‌ ಈ ವಿಚಾರವಾಗಿ ಮೊದಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮೌಖಿಕವಾಗಿ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ ಇದೀಗ ಅಧಿಕೃತವಾಗಿ ತಿಳಿಸಿದ್ದು, ಈ ನಿರ್ಧಾರ ನನ್ನ ವೈಯಕ್ತಿಕ ಕಾರಣವಾಗಿದ್ದು, ಪಕ್ಷದಲ್ಲಾಗುತ್ತಿರುವ ಬಣ ಬಡಿದಾಟವಲ್ಲ ಎಂದು ಹೇಳಿದ್ದಾರೆ.

ಬಿ.ವೈ.ವಿಜಯೇಂದ್ರ ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ. ಆದರೆ ಸುನೀಲ್‌ ಅವರ ಮನವಿಗೆ ಪಕ್ಷದಿಂದ ಯಾವುದೇ ರೀತಿಯ ತೀರ್ಮಾನವನ್ನು ಕೈಗೊಂಡಿಲ್ಲ. ಇನ್ನೂ ಕಳೆದ ಚುನಾವಣೆಯಲ್ಲಿ ಸುನೀಲ್‌ ರಾಜ್ಯ ಉಸ್ತುವಾರಿಯಾಗಿ ವಿಜಯೇಂದ್ರ ಅವರೊಂದಿಗೆ ಯಾವುದೇ ವಿವಾದವಿಲ್ಲದೆ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಬಣ ಬಡಿದಾಟದಲ್ಲಿ ಯಾರ ಪರವಹಿಸದೇ ತಟಸ್ಥವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನೀಲ್‌ ಕುಮಾರ್‌, ನಂದೀಶ್‌ ರೆಡ್ಡಿ, ಪ್ರೀತಮದದ ಗೌಡ ಹಾಗೂ ಪಿ.ರಾಜೀವ್‌ ಅವರನ್ನು ನೇಮಿಸಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

5 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

6 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

6 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

7 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

7 hours ago