ರಾಜ್ಯ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ: ಸುನಿಲ್‌ ಕುಮಾರ್‌

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಬಣ ಬಡಿದಾಟದ ಮಧ್ಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ.ಸುನೀಲ್‌ ಕುಮಾರ್‌ ಮನವಿ ಮಾಡಿದ್ದಾರೆ.

ರಾಜ್ಯ ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ್‌ ನಡುವೆ ಬಣ ಬಡಿದಾಟ ಜೋರಾಗಿ ನಡೆಯುತ್ತಿದೆ. ಈ ನಡುವೆಯೇ ಸುನೀಲ್‌ ಕುಮಾರ್‌ ಅವರು ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿರುವುದು ಕೂತುಹಲ ಮೂಡಿಸಿದೆ. ಸುನೀಲ್‌ ಈ ವಿಚಾರವಾಗಿ ಮೊದಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮೌಖಿಕವಾಗಿ ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ ಇದೀಗ ಅಧಿಕೃತವಾಗಿ ತಿಳಿಸಿದ್ದು, ಈ ನಿರ್ಧಾರ ನನ್ನ ವೈಯಕ್ತಿಕ ಕಾರಣವಾಗಿದ್ದು, ಪಕ್ಷದಲ್ಲಾಗುತ್ತಿರುವ ಬಣ ಬಡಿದಾಟವಲ್ಲ ಎಂದು ಹೇಳಿದ್ದಾರೆ.

ಬಿ.ವೈ.ವಿಜಯೇಂದ್ರ ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮಾಹಿತಿ ನೀಡಿದ್ದಾರೆ. ಆದರೆ ಸುನೀಲ್‌ ಅವರ ಮನವಿಗೆ ಪಕ್ಷದಿಂದ ಯಾವುದೇ ರೀತಿಯ ತೀರ್ಮಾನವನ್ನು ಕೈಗೊಂಡಿಲ್ಲ. ಇನ್ನೂ ಕಳೆದ ಚುನಾವಣೆಯಲ್ಲಿ ಸುನೀಲ್‌ ರಾಜ್ಯ ಉಸ್ತುವಾರಿಯಾಗಿ ವಿಜಯೇಂದ್ರ ಅವರೊಂದಿಗೆ ಯಾವುದೇ ವಿವಾದವಿಲ್ಲದೆ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಬಣ ಬಡಿದಾಟದಲ್ಲಿ ಯಾರ ಪರವಹಿಸದೇ ತಟಸ್ಥವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸುನೀಲ್‌ ಕುಮಾರ್‌, ನಂದೀಶ್‌ ರೆಡ್ಡಿ, ಪ್ರೀತಮದದ ಗೌಡ ಹಾಗೂ ಪಿ.ರಾಜೀವ್‌ ಅವರನ್ನು ನೇಮಿಸಲಾಗಿತ್ತು.

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago