Super specialty trauma center and cancer hospital for every district: Minister Dr. Sharan Prakash Patil announces
ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ. ಪಾಟೀಲ್ ಹೇಳಿದರು.
ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆಯನ್ನು ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಆರಂಭಿಸಲಾಗುವುದು. ಅತಿ ಶೀಘ್ರದಲ್ಲೇ ಇದು ಲೋಕಾರ್ಪಣೆ ಆಗಲಿದೆ ಎಂದರು.
ಸೀಟ್ ಬ್ಲಾಕಿಂಗ್ ಇಲ್ಲ
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 100% ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ನಮ್ಮಲ್ಲಿ ಇಲ್ಲ. ಮೆರಿಟ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ (ಕೆಇಎ) ಮೆಡಿಕಲ್ ಸೀಟು ಹಂಚಿಕೆ ಮಾಡಲಾಗುತ್ತದೆ. 800 ಮೆಡಿಕಲ್ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಲಾಖೆ ವತಿಯಿಂದ ಅನೇಕ ಯೋಜನೆ
ನಮ್ಮ ಇಲಾಖೆ ವತಿಯಿಂದ ಕಾರ್ಯಕರ್ತರ ಅಹವಾಲು ಸ್ವೀಕರಿಸಲಾಗಿದೆ. ಎಲ್ಲೆಲ್ಲಿ ಆಸ್ಪತ್ರೆಗಳನ್ನು ಸುಧಾರಣೆ ಮಾಡಬೇಕು ಎಂದು ಸಲಹೆ ಕೊಟ್ಟಿದ್ದಾರೆ. ನಮ್ಮ ಇಲಾಖೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದಿದ್ದೇವೆ ಎಂದು ಸಚಿವರು ವಿವರಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ರಾಜ್ಯಾದ್ಯಂತ ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭವಾಗಿದೆ. ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟನೆ ಮಾಡಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದೇವೆ. ಈ ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ವಿವರಿಸಿದರು.
ಸಮರ್ಪಕ ಜಾರಿಗೆ ಸುಧಾರಣೆ
2 ಲಕ್ಷದ 86 ಸಾವಿರ ಯುವಕರು ಯುವ ನಿಧಿ ಯೋಜನೆಯಲ್ಲಿ ನೋಂದಣಿ ಆಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…