Super specialty trauma center and cancer hospital for every district: Minister Dr. Sharan Prakash Patil announces
ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ. ಪಾಟೀಲ್ ಹೇಳಿದರು.
ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆಯನ್ನು ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಆರಂಭಿಸಲಾಗುವುದು. ಅತಿ ಶೀಘ್ರದಲ್ಲೇ ಇದು ಲೋಕಾರ್ಪಣೆ ಆಗಲಿದೆ ಎಂದರು.
ಸೀಟ್ ಬ್ಲಾಕಿಂಗ್ ಇಲ್ಲ
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 100% ಪಾರದರ್ಶಕತೆ ಇದೆ. ಯಾವುದೇ ಸೀಟ್ ಬ್ಲಾಕಿಂಗ್ ನಮ್ಮಲ್ಲಿ ಇಲ್ಲ. ಮೆರಿಟ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ (ಕೆಇಎ) ಮೆಡಿಕಲ್ ಸೀಟು ಹಂಚಿಕೆ ಮಾಡಲಾಗುತ್ತದೆ. 800 ಮೆಡಿಕಲ್ ಸೀಟು ಹೆಚ್ಚಳಕ್ಕೆ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಲಾಖೆ ವತಿಯಿಂದ ಅನೇಕ ಯೋಜನೆ
ನಮ್ಮ ಇಲಾಖೆ ವತಿಯಿಂದ ಕಾರ್ಯಕರ್ತರ ಅಹವಾಲು ಸ್ವೀಕರಿಸಲಾಗಿದೆ. ಎಲ್ಲೆಲ್ಲಿ ಆಸ್ಪತ್ರೆಗಳನ್ನು ಸುಧಾರಣೆ ಮಾಡಬೇಕು ಎಂದು ಸಲಹೆ ಕೊಟ್ಟಿದ್ದಾರೆ. ನಮ್ಮ ಇಲಾಖೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದಿದ್ದೇವೆ ಎಂದು ಸಚಿವರು ವಿವರಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ರಾಜ್ಯಾದ್ಯಂತ ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭವಾಗಿದೆ. ಜಯದೇವ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಉದ್ಘಾಟನೆ ಮಾಡಿದ್ದೇವೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ. ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ 400 ಹಾಸಿಗೆಗಳ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದೇವೆ. ಈ ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ವಿವರಿಸಿದರು.
ಸಮರ್ಪಕ ಜಾರಿಗೆ ಸುಧಾರಣೆ
2 ಲಕ್ಷದ 86 ಸಾವಿರ ಯುವಕರು ಯುವ ನಿಧಿ ಯೋಜನೆಯಲ್ಲಿ ನೋಂದಣಿ ಆಗಿದ್ದಾರೆ. ಈ ಯೋಜನೆಯನ್ನು ಇನ್ನಷ್ಟು ಸಮರ್ಪಕವಾಗಿ ಜಾರಿಗೆ ತರಲು ಕೆಲವು ಸುಧಾರಣೆಗಳನ್ನು ತರುತ್ತಿದ್ದೇವೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…