ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ
ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ಜೆಡಿ ಮೀಡಿಯಾ ಹೌಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ‘ಸಾಧಕಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆ ಕೇವಲ ಸಾಧಕಿ, ಕ್ಷಮಯಾಧರಿತ್ರಿ ಮಾತ್ರವಲ್ಲ. ಗಂಡಸರ ಭುಜಕ್ಕೆ ಭುಜಕೊಟ್ಟು ಸಮಾನವಾಗಿ ಬೆಳೆದಿದ್ದಾಳೆ ಎಂದರು.
ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಇದ್ದಾರೆ. ಮಹಿಳೆಯರು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ, ವಿದ್ಯಾಭ್ಯಾಸ ನೀಡೋಣ. ಗಂಡ ಮಾಡಿದ ಸಾಧನೆಯನ್ನು ಹೆಂಡತಿ ತುಂಬಾ ಸಂಭ್ರಮಿಸುತ್ತಾಳೆ. ಇಂಥ ಪ್ರವೃತ್ತಿ ಎಲ್ಲಾ ಗಂಡಸರಲ್ಲೂ ಬರಬೇಕು ಎಂದರು.
ಇಂದಿನ ಆಧುನಿಕ ಮಹಿಳೆ ತನ್ನ ಸಾಧನೆಗೆ ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ. ಪುರುಷರಿಗೆ ಸರಿಸಮನಾಗಿ, ಹಲವು ಕ್ಷೇತ್ರಗಳಲ್ಲಿ ಅವರನ್ನೂ ಮೀರಿಸುವ ರೀತಿಯಲ್ಲಿ ಸಾಧನೆ ಮಾಡುವ ಮೂಲಕ ಇಂದು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಿದ್ದಾಳೆ. ಸಮಾಜದಲ್ಲಿರಬಹುದು, ಕುಟುಂಬದಲ್ಲಿರಬಹುದು ಸಂಕಷ್ಟ ಎದುರಾದಾಗಲೆಲ್ಲ ಗಟ್ಟಿಯಾಗಿ ನಿಂತು ಎದುರಿಸುವವಳು ಮಹಿಳೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಚಿತ್ರ ನಟರಾದ ಅನಿರುದ್ಧ್ ಜತ್ಕರ್, ನಟಿ ಸಂಪದ, ಕಾರ್ಯಕ್ರಮದ ಆಯೋಜಕರಾದ ಜೆ.ಡಿ.ಮೀಡಿಯಾ ಹೌಸ್ನ ಎಂಡಿ ಅನಿತಾ ಗೌಡ, ಹೇಮಾ ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…