ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ
ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ಜೆಡಿ ಮೀಡಿಯಾ ಹೌಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ‘ಸಾಧಕಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆ ಕೇವಲ ಸಾಧಕಿ, ಕ್ಷಮಯಾಧರಿತ್ರಿ ಮಾತ್ರವಲ್ಲ. ಗಂಡಸರ ಭುಜಕ್ಕೆ ಭುಜಕೊಟ್ಟು ಸಮಾನವಾಗಿ ಬೆಳೆದಿದ್ದಾಳೆ ಎಂದರು.
ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಇದ್ದಾರೆ. ಮಹಿಳೆಯರು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ, ವಿದ್ಯಾಭ್ಯಾಸ ನೀಡೋಣ. ಗಂಡ ಮಾಡಿದ ಸಾಧನೆಯನ್ನು ಹೆಂಡತಿ ತುಂಬಾ ಸಂಭ್ರಮಿಸುತ್ತಾಳೆ. ಇಂಥ ಪ್ರವೃತ್ತಿ ಎಲ್ಲಾ ಗಂಡಸರಲ್ಲೂ ಬರಬೇಕು ಎಂದರು.
ಇಂದಿನ ಆಧುನಿಕ ಮಹಿಳೆ ತನ್ನ ಸಾಧನೆಗೆ ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ. ಪುರುಷರಿಗೆ ಸರಿಸಮನಾಗಿ, ಹಲವು ಕ್ಷೇತ್ರಗಳಲ್ಲಿ ಅವರನ್ನೂ ಮೀರಿಸುವ ರೀತಿಯಲ್ಲಿ ಸಾಧನೆ ಮಾಡುವ ಮೂಲಕ ಇಂದು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಿದ್ದಾಳೆ. ಸಮಾಜದಲ್ಲಿರಬಹುದು, ಕುಟುಂಬದಲ್ಲಿರಬಹುದು ಸಂಕಷ್ಟ ಎದುರಾದಾಗಲೆಲ್ಲ ಗಟ್ಟಿಯಾಗಿ ನಿಂತು ಎದುರಿಸುವವಳು ಮಹಿಳೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಚಿತ್ರ ನಟರಾದ ಅನಿರುದ್ಧ್ ಜತ್ಕರ್, ನಟಿ ಸಂಪದ, ಕಾರ್ಯಕ್ರಮದ ಆಯೋಜಕರಾದ ಜೆ.ಡಿ.ಮೀಡಿಯಾ ಹೌಸ್ನ ಎಂಡಿ ಅನಿತಾ ಗೌಡ, ಹೇಮಾ ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…