ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ
ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ಜೆಡಿ ಮೀಡಿಯಾ ಹೌಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ‘ಸಾಧಕಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆ ಕೇವಲ ಸಾಧಕಿ, ಕ್ಷಮಯಾಧರಿತ್ರಿ ಮಾತ್ರವಲ್ಲ. ಗಂಡಸರ ಭುಜಕ್ಕೆ ಭುಜಕೊಟ್ಟು ಸಮಾನವಾಗಿ ಬೆಳೆದಿದ್ದಾಳೆ ಎಂದರು.
ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಇದ್ದಾರೆ. ಮಹಿಳೆಯರು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ, ವಿದ್ಯಾಭ್ಯಾಸ ನೀಡೋಣ. ಗಂಡ ಮಾಡಿದ ಸಾಧನೆಯನ್ನು ಹೆಂಡತಿ ತುಂಬಾ ಸಂಭ್ರಮಿಸುತ್ತಾಳೆ. ಇಂಥ ಪ್ರವೃತ್ತಿ ಎಲ್ಲಾ ಗಂಡಸರಲ್ಲೂ ಬರಬೇಕು ಎಂದರು.
ಇಂದಿನ ಆಧುನಿಕ ಮಹಿಳೆ ತನ್ನ ಸಾಧನೆಗೆ ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ. ಪುರುಷರಿಗೆ ಸರಿಸಮನಾಗಿ, ಹಲವು ಕ್ಷೇತ್ರಗಳಲ್ಲಿ ಅವರನ್ನೂ ಮೀರಿಸುವ ರೀತಿಯಲ್ಲಿ ಸಾಧನೆ ಮಾಡುವ ಮೂಲಕ ಇಂದು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಿದ್ದಾಳೆ. ಸಮಾಜದಲ್ಲಿರಬಹುದು, ಕುಟುಂಬದಲ್ಲಿರಬಹುದು ಸಂಕಷ್ಟ ಎದುರಾದಾಗಲೆಲ್ಲ ಗಟ್ಟಿಯಾಗಿ ನಿಂತು ಎದುರಿಸುವವಳು ಮಹಿಳೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಚಿತ್ರ ನಟರಾದ ಅನಿರುದ್ಧ್ ಜತ್ಕರ್, ನಟಿ ಸಂಪದ, ಕಾರ್ಯಕ್ರಮದ ಆಯೋಜಕರಾದ ಜೆ.ಡಿ.ಮೀಡಿಯಾ ಹೌಸ್ನ ಎಂಡಿ ಅನಿತಾ ಗೌಡ, ಹೇಮಾ ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…