ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಆದರೆ, ಒಂದು ವಾರದೊಳಗೆ ವಾಣಿಜ್ಯ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ಗೇಲ್ ಕಂಪನಿಗೆ ರಿಜಿಸ್ಟರ್ ಮಾಡಿಸಬೇಕು. ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.
10 ಸಾವಿರ ಸಿಲಿಂಡರ್ನಲ್ಲಿ ವಾಣಿಜ್ಯ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ. ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ಮಾಡಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…