ರಾಜ್ಯ

ರಾಜ್ಯದ ಕೈಗಾರಿಕಾ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ, ತ್ವರಿತ ಕ್ರಮಕ್ಕೆ ಸೂಚನೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯದ ನಾನಾ ಕೈಗಾರಿಕಾ ಪ್ರದೇಶಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಸಂಬಂಧಿಸಿದ ವಿವಿಧ ಇಲಾಖೆಗಳೊಂದಿಗೆ ಸೋಮವಾರ ಇಲ್ಲಿ ಸಭೆ ನಡೆಸಿ, ಕಾರ್ಯಸಾಧುವಾದ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಿದರು. ಜೊತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದ್ದರು.

ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ನೀರು ಸರಬರಾಜು ಇಲಾಖೆ, ಬೆಂಗಳೂರು ಜಲ ಮಂಡಲಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಪಾಟೀಲ, `ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಇದಲ್ಲದೆ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 45 ಎಂಎಲ್.ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ಹಾಗೆಯೇ, ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೂಡ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ.

ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 7 ಎಂಎಲ್ ಡಿ, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 13 ಎಂಎಲ್ ಡಿ, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 13 ಎಂಎಲ್ ಡಿಯಷ್ಟು ಕುಡಿಯುವ ನೀರು ಅಗತ್ಯವಿದೆ.

ಒಟ್ಟಾರೆ ಪ್ರತಿನಿತ್ಯ 290 ಎಂ.ಎಲ್.ಡಿ ನೀರು ಈ ಜಿಲ್ಲೆಗಳಿಗೆ ಬೇಕಾಗಿದೆ. ಇದನ್ನು ಬಗೆಹರಿಸದೆ ಹಾಗೆಯೇ ಬಿಟ್ಟರೆ ರಾಜ್ಯದ ಕೈಗಾರಿಕಾ ಬೆಳವಣಿಗೆಯೇ ಹಿನ್ನಡೆ ಕಾಣಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಅದನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲಾಗುತ್ತಿದೆ.

ಆದರೆ, ಇಲ್ಲೆಲ್ಲ ಕುಡಿಯುವ ನೀರಿನ ವಿಪರೀತ ಅಭಾವವಿದೆ. ಆದ್ದರಿಂದ, ಎಲ್ಲೆಲ್ಲಿ ಎಷ್ಟು ನೀರಿನ ಲಭ್ಯತೆ ಇದೆ, ಇಲ್ಲಿಗೆಲ್ಲ ಯಾವ್ಯಾವ ಮೂಲಗಳಿಂದ ಕುಡಿಯುವ ನೀರನ್ನು ಪೂರೈಸಬಹುದು ಎಂದು ಕಂಡುಕೊಳ್ಳಬೇಕು. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ನಡೆಸಲಾಗುವುದು ಎಂದು ಅವರು ನುಡಿದರು.

ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ ಹೇಳಿದರು.

andolanait

Recent Posts

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

37 mins ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

47 mins ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

1 hour ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

2 hours ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

3 hours ago